BREAKING NEWS

ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ: ಆಮಂತ್ರಣ ಪತ್ರಿಕೆ ವೈರಲ್

ಉತ್ತರಕಾಂಡ್‌: ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ ಜೊತೆ ಹಸೆಮಣೆ ಏರಲು ಸಜ್ಜಾಗಿರುವುದು!‌

ಬೇನಾಮ್‌ ಪುತ್ರಿಯ ಮದುವೆ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದ್ದು, ಬಿಜೆಪಿ ಬೆಂಬಲಿಗರು ಹಾಗೂ ನೆಟ್ಟಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಹಿಂದುತ್ವವಾದಿಗಳು ಮಾಜಿ ಶಾಸಕ ಬೇನಾಮ್‌ ಅವರ ಇಬ್ಬಗೆ ನೀತಿಯ ಕುರಿತು ಟ್ರೋಲ್‌ ಮಾಡಿದ್ದಾರೆ. ಬೇರೆಯವರು ಮುಸ್ಲಿಂ ಯುವಕನನ್ನು ವಿವಾಹವಾದರೆ ಲವ್‌ ಜಿಹಾದ್‌ ಎಂದು ಆರೋಪಿಸುತ್ತಿರುವ ಬಗ್ಗೆ ಜಾಲತಾಣದಲ್ಲಿ ಟೀಕೆಯನ್ನು ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

“ದ ಕೇರಳ ಸ್ಟೋರಿ” ಸಿನಿಮಾಕ್ಕೆ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತೆರಿಗೆ ವಿನಾಯ್ತಿ ನೀಡಲಾಗಿದ್ದು, ಇಲ್ಲಿ ಬಿಜೆಪಿ ಮುಖಂಡರೊಬ್ಬರ ಮಗಳು ಮುಸ್ಲಿಂ ಯುವಕನ ಜೊತೆ ವಿವಾಹವಾಗುತ್ತಿದ್ದಾರೆ. ಬಿಜೆಪಿಯ ಇಂತಹ ಇಬ್ಬಗೆಯ ನೀತಿಗಳು ಪಕ್ಷದ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲಿದೆ ಎಂದು ಫೇಸ್‌ ಬುಕ್‌ ಬಳಕೆದಾರರೊಬ್ಬರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಮುಸ್ಲಿಂ ಯುವಕರು ಹಿಂದೂ ಯುವತಿಯನ್ನು ವಿವಾಹವಾಗುವ ಮೂಲಕ ಮತಾಂತರಗೊಳಿಸುತ್ತಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಬಲ ಪಂಥೀಯ ಸಂಘಟನೆಯ ಕಾರ್ಯಕರ್ತರು ಇದೊಂದು ಲವ್‌ ಜಿಹಾದ್‌ ಎಂದು ಕರೆದಿದ್ದರು.

ಭಾರತದಲ್ಲಿ ಮತಾಂತರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಆದರೆ ಬಿಜೆಪಿಯ ಮುಖಂಡರು ತಮ್ಮ ಮಗಳನ್ನು ಮುಸ್ಲಿಂ ಯುವಕನಿಗೆ ಧಾರೆ ಎರೆಯುತ್ತಿದ್ದಾರೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್‌ , ಬಜರಂಗ ದಳ ವಿರೋಧಿಸಬೇಕಾಗಿದೆ ಎಂದು ಪೌರಿ ದೇವಾಲಯ ಆಡಳಿತ ಮಂಡಳಿಯ ಸದಸ್ಯರೊಬ್ಬರು ತಿಳಿಸಿರುವುದಾಗಿ ವರದಿಯಾಗಿದೆ.

ಮೇ 28ರಂದು ಬೇನಾಮಿ ಪುತ್ರಿಯ ವಿವಾಹ ನಡೆಯಲಿದೆ. ಈ ಮದುವೆ ಕಾರ್ಯಕ್ರಮಕ್ಕೆ ಬಿಜೆಪಿ ಹಾಗೂ ಕಾಂಗ್ರೆಸ್‌ ಮುಖಂಡರನ್ನು ಆಹ್ವಾನಿಸಲಾಗಿದೆ ಎಂದು ವರದಿ ತಿಳಿಸಿದೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

6 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

7 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

9 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

10 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago