BREAKING NEWS

ಮೋದಿ ನೋಡಲಿ ಎಂದು ಬಿಜೆಪಿ ನಾಯಕರು ಬೀದಿಯಲ್ಲಿ ನಿಂತಿದ್ದರು : ದಿನೇಶ್ ಗುಂಡೂರಾವ್

ಗದಗ : ರಾಜ್ಯ ಬಿಜೆಪಿ ಮುಖಂಡರ ಮುಖ ನೋಡಲು ಮೋದಿಯವರಿಗೆ ಅಸಡ್ಡೆಯಾಗಿದೆ. ಮೋದಿ ಬೆಂಗಳೂರಿಗೆ ಬಂದರೆ ಅವರತ್ತ ನೋಡಲೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ಗದಗ ಜಿಮ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿಯವರು ನೋಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರು, ಮಾಜಿ ಸಚಿವರು ಬೀದಿಯಲ್ಲಿ ನಿಂತಿದ್ದರು. ಆದರೆ ಅವರು ಇವರನ್ನು ತಿರುಗಿಯೂ ನೋಡಲಿಲ್ಲ. ಇವರಿಗಾದರೂ ಸ್ವಾಭಿಮಾನ ಇರಬೇಕಲ್ವಾ ಎಂದು ಲೇವಡಿ ಮಾಡಿದರು.

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಯಾರು ಬರಬೇಡಿ ಅಂತಾ ಅವರೇ ಹೇಳಿದ್ದರು. ಅದಕ್ಕೆ ನಮ್ಮವರು ಯಾರೂ ಹೋಗಿರಲಿಲ್ಲ. ಬಿಜೆಪಿಯವರು ಹೋಗಿದ್ದರು. ಆದರೆ ಮೋದಿ ಅವರನ್ನು ಕಣ್ಣು ತಿರುಗಿಸಿಯೂ ನೋಡಿಲ್ಲ. ಮೋದಿಯವರನ್ನು ಕರೆಸಿ ಬೀದಿ ಬೀದಿ ಓಡಾಡಿಸಿ ಮಾನ, ಮರ್ಯಾದೆ ತೆಗೆದರು. ಮೋದಿ ಹೆಸರಲ್ಲಿ ವೋಟ್ ಕೇಳಿದರು. ಬಂದಿದ್ದು 60 ಸೀಟ್ ಮಾತ್ರ. ಮೋದಿ ಹೆಸರು ಹಾಳು ಮಾಡಿದ್ದಕ್ಕೆ ಅವರು ಇವರನ್ನು ನೋಡಲಿಲ್ಲ ಎಂದರು.

ಕೋವಿಡ್ ಅಕ್ರಮ ತನಿಖೆ ಬಗ್ಗೆ, ಆಯೋಗ ರಚನೆ ಬಗ್ಗೆ ಗುಡುಗಿದ ಅವರು, ಸಾರ್ವಜನಿಕ ಲೆಕ್ಕ ಪತ್ರ ವರದಿಯನ್ನು ಹಿಂದಿನ ಸರ್ಕಾರ ಸದನಕ್ಕೆ ಒಪ್ಪಿಸಿರಲಿಲ್ಲ. ವರದಿ ಆಧಾರದಲ್ಲಿ ಹಾಗೂ ಬೇರೆ ಬೇರೆ ಮಾಹಿತಿ ಆಧಾರದ ಮೇಲೆ ತನಿಖೆ ಆಗಬೇಕು ಎಂದು ಕೋರಿದ್ದೆವು. ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆಗೆ ಸರ್ಕಾರ ಆದೇಶಿಸಿದೆ ಎಂದು ಹೇಳಿದರು.

ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಈ ಹಿಂದೆ ಆರೋಪ ಮಾಡಿರುವ ಪ್ರಕಾರ ಈಗ ತನಿಖೆ ನಡೆಸಿದ್ದೇವೆ. ಅವರಿಗೆ ಭಯ ಏಕೆ? ತನಿಖೆಯನ್ನು ವಿರೋಧ ಪಕ್ಷಗಳು ಸ್ವಾಗತಿಸಬೇಕು. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಬೇಕು. ಆರೋಪ ಮಾಡಿ ಸುಮ್ಮನಾಗುವುದಲ್ಲ. ಹೇಳಿದಂತೆ ತನಿಖೆ ಮಾಡಿಸುತ್ತಿದ್ದೇವೆ. ಅದೇ ರೀತಿ 40% ಬಿಬಿಎಂಪಿ ಹಗರಣಗಳ ಬಗ್ಗೆಯೂ ತನಿಖೆ ಮಾಡುತ್ತಿದ್ದೇವೆ ಎಂದರು.

lokesh

Recent Posts

ಅಮಾನತಾದ ಬಳಿಕ ಅಬ್ದುಲ್‌ ಜಬ್ಬಾರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್.‌ ಈಗ ಅವರ ಕುದುರೆಗಳು ಮುಂದೆ ಇವೆ…

5 hours ago

ಸೋಮವಾರಪೇಟೆ: ಹಿರಿಕರ ಗ್ರಾಮದಲ್ಲಿ ಮಳೆಗಾಗಿ ದೇವರ ಮೊರೆ

ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…

5 hours ago

ರಾಜ್ಯದಲ್ಲೇ ಕಲಬುರ್ಗಿಯಲ್ಲಿ ಗರಿಷ್ಠ ತಾಪಮಾನ ದಾಖಲು

ಕಲಬುರ್ಗಿ: ಇಂದು(ಏಪ್ರಿಲ್.‌15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…

5 hours ago

ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ ರಾಜ್ಯದ ಕಾಂಗ್ರೆಸ್‌ ಶಾಸಕರು

ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…

5 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು

ಯೋಗೇಶ್‌ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್‌ ಮಾಜಿ…

5 hours ago

ಪ್ರಧಾನಿ ನರೇಂದ್ರ ಮೋದಿಗೆ ಮನವಿ ಪತ್ರ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…

6 hours ago