BREAKING NEWS

ಮೋದಿ ನೋಡಲಿ ಎಂದು ಬಿಜೆಪಿ ನಾಯಕರು ಬೀದಿಯಲ್ಲಿ ನಿಂತಿದ್ದರು : ದಿನೇಶ್ ಗುಂಡೂರಾವ್

ಗದಗ : ರಾಜ್ಯ ಬಿಜೆಪಿ ಮುಖಂಡರ ಮುಖ ನೋಡಲು ಮೋದಿಯವರಿಗೆ ಅಸಡ್ಡೆಯಾಗಿದೆ. ಮೋದಿ ಬೆಂಗಳೂರಿಗೆ ಬಂದರೆ ಅವರತ್ತ ನೋಡಲೇ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದ್ದಾರೆ.

ಗದಗ ಜಿಮ್ಸ್ ಆಸ್ಪತ್ರೆಯ ಕಾರ್ಯಕ್ರಮಕ್ಕೆ ಆಗಮಿಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿಯವರು ನೋಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷರು, ಮಾಜಿ ಸಚಿವರು ಬೀದಿಯಲ್ಲಿ ನಿಂತಿದ್ದರು. ಆದರೆ ಅವರು ಇವರನ್ನು ತಿರುಗಿಯೂ ನೋಡಲಿಲ್ಲ. ಇವರಿಗಾದರೂ ಸ್ವಾಭಿಮಾನ ಇರಬೇಕಲ್ವಾ ಎಂದು ಲೇವಡಿ ಮಾಡಿದರು.

ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಯಾರು ಬರಬೇಡಿ ಅಂತಾ ಅವರೇ ಹೇಳಿದ್ದರು. ಅದಕ್ಕೆ ನಮ್ಮವರು ಯಾರೂ ಹೋಗಿರಲಿಲ್ಲ. ಬಿಜೆಪಿಯವರು ಹೋಗಿದ್ದರು. ಆದರೆ ಮೋದಿ ಅವರನ್ನು ಕಣ್ಣು ತಿರುಗಿಸಿಯೂ ನೋಡಿಲ್ಲ. ಮೋದಿಯವರನ್ನು ಕರೆಸಿ ಬೀದಿ ಬೀದಿ ಓಡಾಡಿಸಿ ಮಾನ, ಮರ್ಯಾದೆ ತೆಗೆದರು. ಮೋದಿ ಹೆಸರಲ್ಲಿ ವೋಟ್ ಕೇಳಿದರು. ಬಂದಿದ್ದು 60 ಸೀಟ್ ಮಾತ್ರ. ಮೋದಿ ಹೆಸರು ಹಾಳು ಮಾಡಿದ್ದಕ್ಕೆ ಅವರು ಇವರನ್ನು ನೋಡಲಿಲ್ಲ ಎಂದರು.

ಕೋವಿಡ್ ಅಕ್ರಮ ತನಿಖೆ ಬಗ್ಗೆ, ಆಯೋಗ ರಚನೆ ಬಗ್ಗೆ ಗುಡುಗಿದ ಅವರು, ಸಾರ್ವಜನಿಕ ಲೆಕ್ಕ ಪತ್ರ ವರದಿಯನ್ನು ಹಿಂದಿನ ಸರ್ಕಾರ ಸದನಕ್ಕೆ ಒಪ್ಪಿಸಿರಲಿಲ್ಲ. ವರದಿ ಆಧಾರದಲ್ಲಿ ಹಾಗೂ ಬೇರೆ ಬೇರೆ ಮಾಹಿತಿ ಆಧಾರದ ಮೇಲೆ ತನಿಖೆ ಆಗಬೇಕು ಎಂದು ಕೋರಿದ್ದೆವು. ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ತನಿಖೆಗೆ ಸರ್ಕಾರ ಆದೇಶಿಸಿದೆ ಎಂದು ಹೇಳಿದರು.

ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಈ ಹಿಂದೆ ಆರೋಪ ಮಾಡಿರುವ ಪ್ರಕಾರ ಈಗ ತನಿಖೆ ನಡೆಸಿದ್ದೇವೆ. ಅವರಿಗೆ ಭಯ ಏಕೆ? ತನಿಖೆಯನ್ನು ವಿರೋಧ ಪಕ್ಷಗಳು ಸ್ವಾಗತಿಸಬೇಕು. ಯಾರು ತಪ್ಪು ಮಾಡಿದ್ದಾರೆ ಅವರಿಗೆ ಶಿಕ್ಷೆಯಾಗಬೇಕು. ಆರೋಪ ಮಾಡಿ ಸುಮ್ಮನಾಗುವುದಲ್ಲ. ಹೇಳಿದಂತೆ ತನಿಖೆ ಮಾಡಿಸುತ್ತಿದ್ದೇವೆ. ಅದೇ ರೀತಿ 40% ಬಿಬಿಎಂಪಿ ಹಗರಣಗಳ ಬಗ್ಗೆಯೂ ತನಿಖೆ ಮಾಡುತ್ತಿದ್ದೇವೆ ಎಂದರು.

lokesh

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

4 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

5 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

6 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

8 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

11 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

11 hours ago