BREAKING NEWS

ಬಿಜೆಪಿಯವರು ಯಾವುದೇ ನಾಚಿಕೆ ಇಲ್ಲದೆ ಲೂಟಿ ಮಾಡಿದ್ದಾರೆ : ಪ್ರಿಯಾಂಕಾ ಗಾಂಧಿ

ಮೈಸೂರು : ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ 1.5 ಲಕ್ಷ ಕೋಟಿ ರೂ. ಲೂಟಿ ಮಾಡಿದೆ ಎಂದು ಕಾಂಗ್ರೆಸ್ ಪಕ್ಷದ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ. ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದ್ದು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ಟಿ. ನರಸೀಪುರ ವಿಧಾನಸಭಾ ಕ್ಷೇತ್ರದ ಹೆಳವರಹುಂಡಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ‘ರಾಜ್ಯದಲ್ಲಿ ಇದ್ದ ಶೇ.40 ಕಮಿಷನ್ ಸರ್ಕಾರ ನಿಮ್ಮನ್ನು ಲೂಟಿ ಮಾಡಿರುವುದು ಅತ್ಯಂತ ದುಃಖಕರ ಸಂಗತಿ. ಬಿಜೆಪಿಯವರು ಯಾವುದೇ ನಾಚಿಕೆ ಇಲ್ಲದೆ ಲೂಟಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ವಿವಿಧ ಹಗರಣಗಳ ಆರೋಪಗಳು, ಗುತ್ತಿಗೆದಾರರ ಆತ್ಮಹತ್ಯೆ ಮತ್ತು ಗುತ್ತಿಗೆದಾರರಿಂದ ಪ್ರಧಾನಿಗೆ ಪತ್ರ ಮತ್ತಿತರ ವಿಚಾರಗಳನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಿಯಾಂಕಾ ಗಾಂಧಿ, ಬಿಜೆಪಿಯಲ್ಲಿ ಅನೇಕ ಮಂದಿ ಶಾಮೀಲಾಗಿರುವುದರಿಂದ ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

ಬಿಜೆಪಿ ಸರ್ಕಾರ ದುರಾಡಳಿತ, ಸ್ವಜನ ಪಕ್ಷಪಾತದ ಸರ್ಕಾರವಾಗಿದೆ. ಶಾಸಕರೊಬ್ಬರ ಪುತ್ರನಿಂದ 8 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಇದರ ತನಿಖೆಗೆ ಸಹಕರಿಸದ ಶಾಸಕರು ಪರೇಡ್ ನಡೆಸಿದರು. ರಾಜ್ಯದಲ್ಲಿ ಒಂದೂವರೆ ಲಕ್ಷ ಕೋಟಿ ರೂ. ಲೂಟಿ ಮಾಡಲಾಗಿದೆ ಎಂದು ಆರೋಪಿಸಿದ ಅವರು, ಈ ಹಣವನ್ನು ರಾಜ್ಯದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದಿತ್ತು, ಅದರಿಂದ ಜನರಿಗೆ ಅನುಕೂಲವಾಗುತ್ತಿತ್ತು ಎಂದರು.

ಬಿಜೆಪಿ ಸರ್ಕಾರ ರಚನೆಯಾಗಿದ್ದೇ ಜನಾದೇಶದ ವಿರುದ್ಧವಾಗಿ : ಜನರನ್ನು ವಂಚಿಸಿ, ಶಾಸಕರಿಗೆ ಆಮಿಷವೊಡ್ಡಿ ಹಣ ಬಲದಿಂದ ಸರ್ಕಾರ ರಚಿಸಿತು. ಕೇಂದ್ರ ಸರ್ಕಾರದಿಂದ ಬರುವ ಅನುದಾನವೂ ಕಡಿಮೆಯಾಯಿತು. ರಾಜ್ಯ ಸರ್ಕಾರವು ನಿರ್ಲಜ್ಜೆಯಿಂದ ಜನರ ಲೂಟಿ ಮಾಡಿತು. ಗುತ್ತಿಗೆದಾರರು, ಶಾಲಾ ಆಡಳಿತ ಮಂಡಳಿಯವರು ಮೋದಿ ಅವರಿಗೆ ಪತ್ರ ಬರೆದರೂ, ಭ್ರಷ್ಟಾಚಾರದ ವಿರುದ್ಧ ಪ್ರಧಾನಿ ಕ್ರಮವಹಿಸಲಿಲ್ಲ’ ‘ಪಿಎಸ್ ಐ ಈ ಸರ್ಕಾರ ಕೋವಿಡ್ ಹೆಸರಿನಲ್ಲೂ ಲೂಟಿ ಮಾಡಿತು. ಶಾಲಾ ಮಕ್ಕಳ ಮೊಟ್ಟೆಯನ್ನೂ ಬಿಡಲಿಲ್ಲ’ ಎಂದು ಟೀಕಿಸಿದರು.

2.5 ಲಕ್ಷ ಉದ್ಯೋಗ : ‘ನಿಮ್ಮಲ್ಲಿ ಎಷ್ಟು ಮಂದಿಗೆ ಸರ್ಕಾರಿ ಉದ್ಯೋಗ ಸಿಕ್ಕಿದೆ’ ಎಂದು ಪ್ರಶ್ನಿಸಿದ ಅವರು, ‘ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಷ್ಟೂ ಹುದ್ದೆ ಭರ್ತಿ ಮಾಡಲಾಗುವುದು. ಇದು ನಮ್ಮ ವಚನ’ ಎಂದು ಪ್ರಿಯಾಂಕಾ ಭರವಸೆ ನೀಡಿದರು.
‘ಮೀಸಲಾತಿ ಹೆಸರಿನಲ್ಲೂ ವಂಚನೆ ಮಾಡಿದ್ದಾರೆ. ಮೀಸಲಾತಿ ಹೆಚ್ಚಿಸಿದ್ದಷ್ಟೇ, ಸಂವಿಧಾನದ 9 ನೇ ಪರಿಚ್ಛೇದಕ್ಕೆ ಸೇರಿಸುವ ಧೈರ್ಯ ಮಾಡಲಿಲ್ಲ. ಬಿಜೆಪಿಗರು ಮೀಸಲಾತಿ ವಿರೋಧಿಗಳು. ಅಮೂಲ್ ಉತ್ಪನ್ನಗಳ ಮಾರಾಟಕ್ಕಾಗಿ ಹಾಲಿನ ಕೃತಕ ಅಭಾವ ಸೃಷ್ಟಿಸಿದ್ದಾರೆ. 90 ಲಕ್ಷ ಲೀ. ಹಾಲು ಉತ್ಪಾದನೆಯು 70 ಲಕ್ಷ ಲೀ. ಗೆ ಇಳಿಕೆಯಾಗಿದೆ. ಇದು ಸಂಚಲ್ಲವೇ?’ ಎಂದು ಪ್ರಶ್ನಿಸಿದರು.

ದರ್ಶನ್ ಧ್ರುವನಾರಾಯಣ ಜೊತೆ ಮಾತು‌ : ಇಂದು ನಡೆದ ಚುನಾವಣಾ ಪ್ರಚಾರ ಸಭೆ ಕಾರ್ಯಕ್ರಮದ ವೇದಿಕೆಗೆ ಆಗಮಿಸಿದ AICC ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರಿಗೆ ಶಾಸಕ ತನ್ವೀರ್ ಸೇಠ್ ಹಾಗೂ ಡಾ.ಎಚ್.ಸಿ.ಮಹದೇವಪ್ಪ ಅವರು ದಿ.ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ ಅವರನ್ನು ಪರಿಚಯಿಸಿದರು. ಪ್ರಿಯಾಂಕಾ ಅವರು ದರ್ಶನ್ ಅವರ ಯೋಗಕ್ಷೇಮ ವಿಚಾರಿಸಿ ಕೆಲಕಾಲ ಮಾತನಾಡಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಚಾಮುಂಡೇಶ್ವರಿ ಕ್ಷೇತ್ರದ ಅಭ್ಯರ್ಥಿ ಮಾವಿನಹಳ್ಳಿ ಸಿದ್ದೇಗೌಡ, ಚಾಮರಾಜ ಕ್ಷೇತ್ರದ ಅಭ್ಯರ್ಥಿ ಕೆ.ಹರೀಶ್ ಗೌಡ, ನಂಜನಗೂಡು ಕ್ಷೇತ್ರದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ, ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಕಾಗಲವಾಡಿ ಶಿವಣ್ಣ, ಸುನಿಲ್ ಬೋಸ್, ಸುನಿತಾ ವೀರಪ್ಪಗೌಡ, ವರುಣ, ತಿ.ನರಸೀಪುರ, ಚಾಮುಂಡೇಶ್ವರಿ, ನಂಜನಗೂಡು, ಮಂಡ್ಯದ ಮಳವಳ್ಳಿ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಗಳ ಸಾರ್ವಜನಿಕರು, ಬೆಂಬಲಿಗರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

lokesh

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

5 mins ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

20 mins ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

34 mins ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

58 mins ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

1 hour ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

1 hour ago