ನವದೆಹಲಿ: ಇದೇ ಜುಲೈ 16ರಿಂದ ಆರಂಭವಾಗಲಿರುವ ಪ್ಯಾರಿಸ್ ಒಲಂಪಿಕ್ಸ್ 2024ಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಅವರು ಆಯ್ಕೆಯಾಗಿದ್ದಾರೆ.
ಬಿಹಾರದ ಜಮುಯಿ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕಿಯಾಗಿದ್ದಾರೆ ಶ್ರೇಯಸಿ. ಇವರು ಮಾಜಿ ಸಚಿವ ದಿವಂಗತ ದಿಗ್ವಿಜಯ್ ಸಿಂಗ್ ಅವರ ಪುತ್ರಿಯಾಗಿದ್ದಾರೆ. ಮತ್ತು ಬಿಹಾರದ ಮೂಲಕ ಒಲಂಪಿಕ್ಸ್ಗೆ ಅರ್ಹತೆ ಪಡೆದ ಮೊದಲ ವ್ಯಕ್ತಿ ಇವರಾಗಿದ್ದಾರೆ.
2014 ರಲ್ಲಿ ನಡೆದ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಡಬಲ್ ಟ್ರ್ಯಾಪ್ ಶೂಟಿಂಗ್ನಲ್ಲಿ ಬೆಳ್ಳಿ ಹಾಗೂ 2014ರ ಏಷ್ಯನ್ ಗೇಮ್ಸ್ನಲ್ಲಿ ಡಬಲ್ ಟ್ರ್ಯಾಪ್ ಈವೆಂಟ್ಸ್ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಶೇಯಸಿ ಸಿಂಗ್ ಅವರಿಗೆ ಪ್ಯಾರಿಸ್ ಒಲಂಪಿಕ್ಸ್ನಲ್ಲಿ ಆಡುವ ಸುವರ್ಣಾವಕಾಶ ಲಭಿಸಿದೆ.
ಮೊದಲಿಗೆ ಒಲಂಪಿಕ್ಸ್ ಆಯ್ಕೆ ಮಾಡಲಾದ ಪಟ್ಟಿಯಲ್ಲಿ ಶ್ರೇಯಸಿ ಸಿಂಗ್ ಹೆಸರು ಇರಲಿಲ್ಲ. ಮತ್ತೊಂದೆಡೆ ಮನು ಪ್ರಭಾಕರ್ ಅವರು ಏರ್ ಪಿಸ್ತೂಲ್ ಮತ್ತು ಸ್ಪೋರ್ಟ್ ಪಿಸ್ತೂಲ್ ಎರಡರಲ್ಲೂ ಅಗ್ರಸ್ಥಾನ ಗಳಿಸಿದ್ದರು. ಎರಡೂ ವಿಭಾಗಕ್ಕೂ ಆಯ್ಕೆಯಾಗಿದ್ದ ಮನು ಪ್ರಭಾಕರ್ ಒಂದೇ ಕೋಟಾದಡಿ ಸ್ಪರ್ಧಿಸಬಹುದಾಗಿತ್ತು. ಹೀಗಾಗಿ ಮನು ಪ್ರಭಾಕರ್ ಅವರ ಬಳಿಯಿದ್ದ ಕೋಟಾವನ್ನು ಟ್ರ್ಯಾಪ್ ಶೂಟರ್ಗಾಗಿ ಬದಲಾಯಿಸಲಾಯಿತು.
ಈ ಬದಲಾವಣೆ ಬಗ್ಗೆ ನ್ಯಾಷನಲ್ ರೈಫಲ್ ಪೆಡರೇಷನ್ ಅಸೋಸಿಯೇಷನ್ ಆಫ್ ಇಂಡಿಯಾ (ಎನ್ಆರ್ಎಐ) ಇಂಟರ್ನ್ಯಾಷನಲ್ ಶೂಟಿಂಗ್ ಸ್ಪೋರ್ಟ್ಸ್ ಫೆಡರೇಷನ್ (ಐಎಸ್ಎಸ್ಎಫ್) ಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಈ ಮನವಿಯನ್ನು ಪುರಸ್ಕರಿಸಿದ್ದು, ಶ್ರೇಯಸಿ ಸಿಂಗ್ಗೆ ಒಲಂಪಿಕ್ಸ್ನಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…