BREAKING NEWS

ಪ್ಯಾರಿಸ್‌ ಒಲಂಪಿಕ್ಸ್‌ಗೆ ಅರ್ಹತೆ ಪಡೆದ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್‌!

ನವದೆಹಲಿ: ಇದೇ ಜುಲೈ 16ರಿಂದ ಆರಂಭವಾಗಲಿರುವ ಪ್ಯಾರಿಸ್‌ ಒಲಂಪಿಕ್ಸ್‌ 2024ಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್‌ ಅವರು ಆಯ್ಕೆಯಾಗಿದ್ದಾರೆ.

ಬಿಹಾರದ ಜಮುಯಿ ವಿಧಾಸಭಾ ಕ್ಷೇತ್ರದ ಬಿಜೆಪಿ ಶಾಸಕಿಯಾಗಿದ್ದಾರೆ ಶ್ರೇಯಸಿ. ಇವರು ಮಾಜಿ ಸಚಿವ ದಿವಂಗತ ದಿಗ್ವಿಜಯ್‌ ಸಿಂಗ್‌ ಅವರ ಪುತ್ರಿಯಾಗಿದ್ದಾರೆ. ಮತ್ತು ಬಿಹಾರದ ಮೂಲಕ ಒಲಂಪಿಕ್ಸ್‌ಗೆ ಅರ್ಹತೆ ಪಡೆದ ಮೊದಲ ವ್ಯಕ್ತಿ ಇವರಾಗಿದ್ದಾರೆ.

2014 ರಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಡಬಲ್‌ ಟ್ರ್ಯಾಪ್‌ ಶೂಟಿಂಗ್‌ನಲ್ಲಿ ಬೆಳ್ಳಿ ಹಾಗೂ 2014ರ ಏಷ್ಯನ್‌ ಗೇಮ್ಸ್‌ನಲ್ಲಿ ಡಬಲ್‌ ಟ್ರ್ಯಾಪ್‌ ಈವೆಂಟ್ಸ್‌ನಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಶೇಯಸಿ ಸಿಂಗ್‌ ಅವರಿಗೆ ಪ್ಯಾರಿಸ್‌ ಒಲಂಪಿಕ್ಸ್‌ನಲ್ಲಿ ಆಡುವ ಸುವರ್ಣಾವಕಾಶ ಲಭಿಸಿದೆ.

ಮೊದಲಿಗೆ ಒಲಂಪಿಕ್ಸ್‌ ಆಯ್ಕೆ ಮಾಡಲಾದ ಪಟ್ಟಿಯಲ್ಲಿ ಶ್ರೇಯಸಿ ಸಿಂಗ್‌ ಹೆಸರು ಇರಲಿಲ್ಲ. ಮತ್ತೊಂದೆಡೆ ಮನು ಪ್ರಭಾಕರ್‌ ಅವರು ಏರ್‌ ಪಿಸ್ತೂಲ್‌ ಮತ್ತು ಸ್ಪೋರ್ಟ್‌ ಪಿಸ್ತೂಲ್‌ ಎರಡರಲ್ಲೂ ಅಗ್ರಸ್ಥಾನ ಗಳಿಸಿದ್ದರು. ಎರಡೂ ವಿಭಾಗಕ್ಕೂ ಆಯ್ಕೆಯಾಗಿದ್ದ ಮನು ಪ್ರಭಾಕರ್‌ ಒಂದೇ ಕೋಟಾದಡಿ ಸ್ಪರ್ಧಿಸಬಹುದಾಗಿತ್ತು. ಹೀಗಾಗಿ ಮನು ಪ್ರಭಾಕರ್‌ ಅವರ ಬಳಿಯಿದ್ದ ಕೋಟಾವನ್ನು ಟ್ರ್ಯಾಪ್‌ ಶೂಟರ್‌ಗಾಗಿ ಬದಲಾಯಿಸಲಾಯಿತು.

ಈ ಬದಲಾವಣೆ ಬಗ್ಗೆ ನ್ಯಾಷನಲ್‌ ರೈಫಲ್‌ ಪೆಡರೇಷನ್‌ ಅಸೋಸಿಯೇಷನ್‌ ಆಫ್‌ ಇಂಡಿಯಾ (ಎನ್‌ಆರ್‌ಎಐ) ಇಂಟರ್‌ನ್ಯಾಷನಲ್‌ ಶೂಟಿಂಗ್‌ ಸ್ಪೋರ್ಟ್ಸ್‌ ಫೆಡರೇಷನ್‌ (ಐಎಸ್‌ಎಸ್‌ಎಫ್‌) ಗೆ ಮನವಿ ಸಲ್ಲಿಸಲಾಗಿತ್ತು. ಇದೀಗ ಈ ಮನವಿಯನ್ನು ಪುರಸ್ಕರಿಸಿದ್ದು, ಶ್ರೇಯಸಿ ಸಿಂಗ್‌ಗೆ ಒಲಂಪಿಕ್ಸ್‌ನಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಉಳಿಸಿ, ವಿಬಿ.ಜಿ ರಾಮ್ ಜಿ ಅಳಿಸಿ ಕಾರ್ಯಕ್ರಮ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಂಗ್ರೆಸ್ ಪಕ್ಷವು ದೇಶದ ಜನರಿಗೆ ಆಹಾರ ಭದ್ರತಾ ಕಾಯ್ದೆ, ಉದ್ಯೋಗ…

15 mins ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಗೆ ಸಿದ್ಧತೆ: ಬಸವನಕಡ ಸ್ಥಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ನೇತೃತ್ವದ ತಂಡ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ 5 ದಿನಗಳ ಕಾಲ…

27 mins ago

ಮೈಸೂರಿನಲ್ಲಿ ಯಾವುದೇ ಡ್ರಗ್ ಪತ್ತೆಯಾಗಿಲ್ಲ: ಸಚಿವ ಪರಮೇಶ್ವರ್‌ ಸ್ಪಷ್ಟನೆ

ಮೈಸೂರು: ಮೈಸೂರು ಪೊಲೀಸರು ನನಗೆ ಸರಿಯಾದ ಮಾಹಿತಿ ಕೊಟ್ಟಿದ್ದು, ಯಾವುದೇ ಡ್ರಗ್ಸ್‌ ಪತ್ತೆಯಾಗಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಸ್ಪಷ್ಟನೆ…

2 hours ago

ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಹೈಕಮಾಂಡ್ ಎಲ್ಲೂ ಮಾತನಾಡಿಲ್ಲ: ಗೃಹ ಸಚಿವ ಪರಮೇಶ್ವರ್‌

ಮೈಸೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಾವಣೆ ಮಾಡುವ ಬಗ್ಗೆ ಹೈಕಮಾಂಡ್‌ ಎಲ್ಲೂ ಕೂಡ ಮಾತನಾಡಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌…

2 hours ago

ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ: ಬಸ್‌ ಹರಿದು ಯುವತಿ ಸಾವು

ಬೆಂಗಳೂರು: ಕಿಲ್ಲರ್‌ ಬಿಎಂಟಿಸಿ ಬಸ್‌ಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಟಿನ್‌ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿದ್ದು, ಮೃತರನ್ನು…

3 hours ago

ಬೆಂಗಳೂರಿನಲ್ಲಿ ಮತ್ತೆ ಹೆಚ್ಚಿದ ಚಳಿಯ ಅಬ್ಬರ: ತಾಪಮಾನ ಎಷ್ಟಿದೆ ಗೊತ್ತಾ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮತ್ತೆ ಚಳಿಯ ಅಬ್ಬರ ಜೋರಾಗಿದೆ. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕೆಲ…

3 hours ago