ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದು ತೂರಿದ ಘಟನೆ ನಡೆಯಿತು.
ಕೇಂದ್ರದ ವಿಪಕ್ಷಗಳ ಸಭೆಗೆ ಆಗಮಿಸಿದ್ದ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿ, ದುರ್ಬಳಕೆ ಮಾಡಲಾಗಿತ್ತು ಎಂದು ಆರೋಪಿಸಿ, ಬುಧವಾರ ಸದನದ ಬಾವಿಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಧರಣಿ ನಡೆಸಿದ್ದು, ಈ ಹಿನ್ನೆಲೆ ಭೋಜನ ವಿರಾಮ ರದ್ದುಪಡಿಸಿ ಸ್ಪೀಕರ್ ಕಲಾಪ ಮುಂದುವರಿಸಿದರು.
ಬಳಿಕ ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಮಾತನಾಡುತ್ತಿದ್ದ ವೇಳೆ ಸದನದ ಬಾವಿಯಲ್ಲಿ ಧರಣಿ ನಡೆಸುತ್ತಿದ್ದ ಬಿಜೆಪಿ ಸದಸ್ಯರು ಏಕಾ ಏಕಿ ಉಪಸಭಾಧ್ಯಕ್ಷರ ಕುರ್ಚಿಯತ್ತ ವಿಧೇಯಕ ಪ್ರತಿಗಳನ್ನ ಹರಿದು ಎಸೆದಿದ್ದಾರೆ. ಇದಕ್ಕೆ ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಸೇರಿ ಸಚಿವರು, ಆಡಳಿತ ಪಕ್ಷದ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ.…
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ…
ಮಂಜು ಕೋಟೆ ಕೋಟೆ ತಾಲ್ಲೂಕು ಕುರುಬ ಸಮಾಜದ ಅಧ್ಯಕ್ಷರಾಗಿ ಮೊಳಿಯೂರು ಆನಂದ್ ಮುಂದುವರಿಕೆಗೆ ನ್ಯಾಯಾಲಯದ ತೀರ್ಪು ಎಚ್.ಡಿ.ಕೋಟೆ: ತಾಲ್ಲೂಕು ಕುರುಬ…
ಕೆ.ಬಿ.ರಮೇಶನಾಯಕ ಬಡವರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಆಹಾರ ಒದಗಿಸುವ ಉದ್ದೇಶ ಮೈಸೂರು: ಬಡವರ ಕೈಗೆಟುಕುವ ದರದಲ್ಲಿ ಗುಣಮಟ್ಟದ ತಿಂಡಿ, ಊಟವನ್ನು…
ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…