ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು ಶಾಸಕರ ಜೊತೆ ನಾನು ಮಾತನಾಡಿ ಈ ಬಗ್ಗೆ ವಿವರನೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ಸಭೆಯಲ್ಲಿ ಯಾವುದೇ ಬಿಜೆಪಿ ಶಾಸಕರು ಭಾಗಿಯಾಗಿಲ್ಲ. ಬಳಿಕ ಪ್ರತ್ಯೇಕವಾಗಿ ನಾನೇ ಆಯೋಜನೆ ಮಾಡಿದ್ದ ಓತಣಕೂಟದಲ್ಲಿ ಪಾಲ್ಗೊಳ್ಳುವಂತೆ ನಾನೇ ಆಹ್ವಾನ ಮಾಡಿದ್ದೆ ಎಂದು ತಿಳಿಸಿದರು.
ಬಿಜೆಪಿ ಪಕ್ಷ ಸೇರಿದಂತೆ ಇತರೆ ಪಕ್ಷದ ನಾಯಕರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು ಎಂದರು.