Mysore
19
overcast clouds
Light
Dark

ಬಿಜೆಪಿ ಶಾಸಕರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿ ಬಗ್ಗೆ ಇಂದೇ ವಿಚಾರಿಸುವೆ: ಬಿ.ವೈ.ವಿಜಯೇಂದ್ರ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆ ನಂತರ ಬಿಜೆಪಿ ಶಾಸಕರು ಕಾಂಗ್ರೆಸ್‌ ಪಕ್ಷ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾಗಿದ್ದರ ಬಗ್ಗೆ ಮಾಹಿತಿ ತಿಳಿದು ಬಂದಿದೆ. ಈ ಬಗ್ಗೆ ಇಂದೇ ಶಾಸಕರನ್ನು ವಿಚಾರಣೆ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಔತಣಕೂಟದಲ್ಲಿ ಭಾಗಿಯಾಗಿದ್ದ ಮೂರು ಶಾಸಕರ ಜೊತೆ ನಾನು ಮಾತನಾಡಿ ಈ ಬಗ್ಗೆ ವಿವರನೆ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನು ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಮಾತನಾಡಿ, ಸಭೆಯಲ್ಲಿ ಯಾವುದೇ ಬಿಜೆಪಿ ಶಾಸಕರು ಭಾಗಿಯಾಗಿಲ್ಲ. ಬಳಿಕ ಪ್ರತ್ಯೇಕವಾಗಿ ನಾನೇ ಆಯೋಜನೆ ಮಾಡಿದ್ದ ಓತಣಕೂಟದಲ್ಲಿ ಪಾಲ್ಗೊಳ್ಳುವಂತೆ ನಾನೇ ಆಹ್ವಾನ ಮಾಡಿದ್ದೆ ಎಂದು ತಿಳಿಸಿದರು.

ಬಿಜೆಪಿ ಪಕ್ಷ ಸೇರಿದಂತೆ ಇತರೆ ಪಕ್ಷದ ನಾಯಕರು ಈ ಔತಣಕೂಟದಲ್ಲಿ ಭಾಗವಹಿಸಿದ್ದರು ಎಂದರು.

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ