BREAKING NEWS

ಹಂಗಾಮಿ ಸ್ಪೀಕರ್‌ ಆಗಿ ಬಿಜೆಪಿ ಸಂಸದ ಭರ್ತೃಹರಿ ಪ್ರಮಾಣವಚನ ಸ್ವೀಕಾರ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ (ಜೂನ್‌.24) ಆರಂಭಗೊಂಡಿದ್ದು, ಲೋಕಸಭೆಯ ಹಂಗಾಮಿ ಅಧ್ಯಕ್ಷರಾಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್‌ ಪ್ರಮಾಣವಚನ ಸ್ವೀಕರಿಸಿದರು.

ಸೋಮವಾರ ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭರ್ತೃಹರಿ ಅವರಿಗೆ ಪ್ರಮಾಣವಚನ ಬೋಧಿಸಿದರು. ಬಳಿಕ ಸಂಸತ್‌ನಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ ವಾರಣಾಸಿ ಕ್ಷೇತ್ರದ ಸಂಸದರಾಗಿ ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದರು.

ಅಧಿವೇಶನದ ಮೊದಲ ದಿನವಾದ ಇಂದು 280 ಮಂದಿ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದು, ಮಂಗಳವಾರ 264 ಮಂದಿ ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಜೂನ್‌.26ರಂದು ಲೋಕಸಭಾ ಸ್ಪೀಕರ್‌ ಹುದ್ದೆಗೆ ಚುನಾವಣೆ ನಡೆಯಲಿದೆ.

ಉಭಯ ಸದನಗಳ ಜಂಟಿ ಸಭೆ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್‌.27 ರಂದು ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿಗಳ ಕೃತಜ್ಞತಾ ನಿರ್ಣಯದ ಮೇಲಿನ ಚರ್ಚಗೆ ಜೂನ್‌. 28ರಿಂದ ಆರಂಭವಾಗುತ್ತದೆ. ಬಳಿಕ ಎರಡು ಸದನಗಳನ್ನು ಮುಂದೂಡಲಾಗಿದ್ದು, ಜುಲೈ 22ರಂದು ಕೇಂದ್ರ ಬಜೆಟ್‌ ಮಂಡನೆಗಾಗಿ ಮತ್ತೆ ಉಭಯ ಸದನಗಳಲ್ಲಿ ಸೇರಲಿವೆ.

ಆಂದೋಲನ ಡೆಸ್ಕ್

Recent Posts

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

15 mins ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

24 mins ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

30 mins ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

8 hours ago

ಓದುಗರ ಪತ್ರ: ಬದಲಾಗುತ್ತಿದೆ ಚಾತುರ್ಮಾಸ ಪದದ ಅರ್ಥ

ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…

8 hours ago

ಓದುಗರ ಪತ್ರ: ದಸರಾ ಮಹೋತ್ಸವ ಸರಳವಾಗಿರಲಿ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…

8 hours ago