ಬೆಳಗಾವಿ : ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13 ರಿಂದ 14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.
ಹುಬ್ಬಳ್ಳಿ ಕೇಂದ್ರ ಮತಕ್ಷೇತ್ರದಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ್ ಅವರು ಸ್ಪರ್ಧಿಸಿದ್ದು, ಅಲ್ಲಿನ ವಾತಾವರಣ ಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್ ಶೆಟ್ಟರ್ ಪಕ್ಷ ಭೇದ ಮರೆತು ಕೆಲಸ ಮಾಡಿದ್ದರಿಂದ ಚೆನ್ನಾಗಿ ನಡೀತಾ ಇದೆ. ಅವರು ಬರ್ತಾರೆ ಎಂದು ತಮ್ಮ ಬೀಗರಾದ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ ಪರವಾಗಿ ಬ್ಯಾಟಿಂಗ್ ಮಾಡಿದರು.
ಅಲ್ಲದೇ ಶೆಟ್ಟರ್ ಅವರು ಕಾಂಗ್ರೆಸ್ನಿಂದ ಸ್ಪರ್ಧೆ ಮಾಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಾಲಿಟಿಕ್ಸ್ನಲ್ಲಿ ಹಾಗೆ ಎಲ್ಲಾ ಆಗೋದು ಎಂದ ಅವರು, ಮೊದಲಿಂದಲೂ ಜಗದೀಶ್ ಶೆಟ್ಟರ್ ಅಲ್ಲಿ ಹೆಸರು ಮಾಡಿದ್ದಾರೆ ಎಂದರು.
ಬಿಜೆಪಿ ಸಂಸದರಾಗಿ ಕಾಂಗ್ರೆಸ್ ಅಭ್ಯರ್ಥಿಗೆ ಪರವಾಗಿ ಸಪೋರ್ಟ್ ಕುರಿತು ಪ್ರತಿಕ್ರಿಯಿಸಿದ ಅವರು, ಅವರದು ಅಲ್ಲಿ, ನಮ್ಮದು ಇಲ್ಲಿ ಎಂದು ಸಮಜಾಯಿಷಿ ನೀಡಿದರು. ಮುಂದಿನ ಚುನಾವಣೆಯಲ್ಲಿ ತಾವು ಪಕ್ಷ ಬದಲಾವಣೆ ಮಾಡುತ್ತೀರಾ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪಕ್ಷ ಬದಲಾವಣೆ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೆ ಇರುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದರು.
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…