BREAKING NEWS

ಕಾಂಗ್ರೆಸ್‌ನಿಂದ ಶೆಟ್ಟರ್‌ ಗೆಲ್ತಾರೆ ಎಂದ ಬಿಜೆಪಿ ಸಂಸದೆ

ಬೆಳಗಾವಿ : ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13 ರಿಂದ 14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಕೇಂದ್ರ ಮತಕ್ಷೇತ್ರದಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ್‌ ಅವರು ಸ್ಪರ್ಧಿಸಿದ್ದು, ಅಲ್ಲಿನ ವಾತಾವರಣ ಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್‌ ಶೆಟ್ಟರ್‌ ಪಕ್ಷ ಭೇದ ಮರೆತು ಕೆಲಸ ಮಾಡಿದ್ದರಿಂದ ಚೆನ್ನಾಗಿ ನಡೀತಾ ಇದೆ. ಅವರು ಬರ್ತಾರೆ ಎಂದು ತಮ್ಮ ಬೀಗರಾದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ ಪರವಾಗಿ ಬ್ಯಾಟಿಂಗ್‌ ಮಾಡಿದರು.

ಅಲ್ಲದೇ ಶೆಟ್ಟರ್‌ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಾಲಿಟಿಕ್ಸ್‌ನಲ್ಲಿ ಹಾಗೆ ಎಲ್ಲಾ ಆಗೋದು ಎಂದ ಅವರು, ಮೊದಲಿಂದಲೂ ಜಗದೀಶ್‌ ಶೆಟ್ಟರ್‌ ಅಲ್ಲಿ ಹೆಸರು ಮಾಡಿದ್ದಾರೆ ಎಂದರು.

ಬಿಜೆಪಿ ಸಂಸದರಾಗಿ ಕಾಂಗ್ರೆಸ್‌ ಅಭ್ಯರ್ಥಿಗೆ ಪರವಾಗಿ ಸಪೋರ್ಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಅವರದು ಅಲ್ಲಿ, ನಮ್ಮದು ಇಲ್ಲಿ ಎಂದು ಸಮಜಾಯಿಷಿ ನೀಡಿದರು. ಮುಂದಿನ ಚುನಾವಣೆಯಲ್ಲಿ ತಾವು ಪಕ್ಷ ಬದಲಾವಣೆ ಮಾಡುತ್ತೀರಾ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪಕ್ಷ ಬದಲಾವಣೆ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೆ ಇರುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದರು.

lokesh

Recent Posts

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

29 mins ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

35 mins ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

40 mins ago

ಮಳೆ ಅನಾಹುತ ಎದುರಿಸಲು ಮೈಸೂರು ನಗರಪಾಲಿಕೆ ಸಿದ್ಧತೆ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಎರಡು ದಿನಗಳ ಹಿಂದೆ ಸುರಿದ ಮಳೆಗೆ ಮೈಸೂರು ನಗರದ ಹಲವೆಡೆ ಮರಉರುಳಿರುವುದೂ ಸೇರಿದಂತೆ ಅನೇಕ ಅನಾಹುತಗಳು ನಡೆದಿದೆ.…

43 mins ago

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

9 hours ago