BREAKING NEWS

ಕಾಂಗ್ರೆಸ್‌ನಿಂದ ಶೆಟ್ಟರ್‌ ಗೆಲ್ತಾರೆ ಎಂದ ಬಿಜೆಪಿ ಸಂಸದೆ

ಬೆಳಗಾವಿ : ಜಿಲ್ಲೆಯಲ್ಲಿ ಬಿಜೆಪಿ ಪರ ಅಲೆ ಇರುವುದರಿಂದ ಸುಮಾರು 13 ರಿಂದ 14ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತವೆ ಎಂದು ಸಂಸದೆ ಮಂಗಲ ಅಂಗಡಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಕೇಂದ್ರ ಮತಕ್ಷೇತ್ರದಲ್ಲಿ ತಮ್ಮ ಬೀಗರಾದ ಜಗದೀಶ ಶೆಟ್ಟರ್‌ ಅವರು ಸ್ಪರ್ಧಿಸಿದ್ದು, ಅಲ್ಲಿನ ವಾತಾವರಣ ಹೇಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಜಗದೀಶ್‌ ಶೆಟ್ಟರ್‌ ಪಕ್ಷ ಭೇದ ಮರೆತು ಕೆಲಸ ಮಾಡಿದ್ದರಿಂದ ಚೆನ್ನಾಗಿ ನಡೀತಾ ಇದೆ. ಅವರು ಬರ್ತಾರೆ ಎಂದು ತಮ್ಮ ಬೀಗರಾದ ಕಾಂಗ್ರೆಸ್‌ ಅಭ್ಯರ್ಥಿ ಜಗದೀಶ್‌ ಶೆಟ್ಟರ ಪರವಾಗಿ ಬ್ಯಾಟಿಂಗ್‌ ಮಾಡಿದರು.

ಅಲ್ಲದೇ ಶೆಟ್ಟರ್‌ ಅವರು ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಾಲಿಟಿಕ್ಸ್‌ನಲ್ಲಿ ಹಾಗೆ ಎಲ್ಲಾ ಆಗೋದು ಎಂದ ಅವರು, ಮೊದಲಿಂದಲೂ ಜಗದೀಶ್‌ ಶೆಟ್ಟರ್‌ ಅಲ್ಲಿ ಹೆಸರು ಮಾಡಿದ್ದಾರೆ ಎಂದರು.

ಬಿಜೆಪಿ ಸಂಸದರಾಗಿ ಕಾಂಗ್ರೆಸ್‌ ಅಭ್ಯರ್ಥಿಗೆ ಪರವಾಗಿ ಸಪೋರ್ಟ್‌ ಕುರಿತು ಪ್ರತಿಕ್ರಿಯಿಸಿದ ಅವರು, ಅವರದು ಅಲ್ಲಿ, ನಮ್ಮದು ಇಲ್ಲಿ ಎಂದು ಸಮಜಾಯಿಷಿ ನೀಡಿದರು. ಮುಂದಿನ ಚುನಾವಣೆಯಲ್ಲಿ ತಾವು ಪಕ್ಷ ಬದಲಾವಣೆ ಮಾಡುತ್ತೀರಾ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನು ಪಕ್ಷ ಬದಲಾವಣೆ ಮಾಡುವುದಿಲ್ಲ. ನಾನು ಬಿಜೆಪಿಯಲ್ಲೆ ಇರುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಾವು ಬಿಜೆಪಿಯಿಂದಲೇ ಸ್ಪರ್ಧೆ ಮಾಡುವುದಾಗಿ ಸ್ಪಷ್ಟಪಡಿಸಿದರು.

lokesh

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

34 mins ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

9 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

9 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

9 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

12 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

12 hours ago