BREAKING NEWS

ಬಿಜೆಪಿ ಪಕ್ಷ ಮತ್ತು ಅದರ ಬೆಂಬಲಿಗರು ‘ರಾಕ್ಷಸರು’; ಸಂಸದ ಸುರ್ಜೇವಾಲಾ

ನವದೆಹಲಿ : ಕಾಂಗ್ರೆಸ್ ನಾಯಕ ಮತ್ತು ರಾಜ್ಯಸಭಾ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಭಾರತೀಯ ಜನತಾ ಪಕ್ಷ ಮತ್ತು ಅದರ ಬೆಂಬಲಿಗರನ್ನು ವಿವರಿಸಲು ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ. ಬಿಜೆಪಿಗರನ್ನು ‘ರಾಕ್ಷಸರು’ ಎಂದು ಕರೆದಿದ್ದು, ವಿವಾದವನ್ನು ಹುಟ್ಟು ಹಾಕಿದ್ದಾರೆ. ಸುರ್ಜೇವಾಲಾ ಅವರ ಹೇಳಿಕೆಗೆ ಹಲವು ಬಿಜೆಪಿ ನಾಯಕರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಆಪಾದಿತ ಪೇಪರ್ ಸೋರಿಕೆ ಪ್ರಕರಣದ ಕುರಿತು ಹರಿಯಾಣದ ಬಿಜೆಪಿ-ಜೆಜೆಪಿ ಸರ್ಕಾರದ ವಿರುದ್ಧ ಸುರ್ಜೆವಾಲಾ ವಾಗ್ದಾಳಿ ನಡೆಸಿದರು.

ಭಾನುವಾರ ಕೈತಾಲ್‌ನಲ್ಲಿ ‘ಜನ ಆಕ್ರೋಶ್ ರ್ಯಾಲಿ’ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ, ‘ಮನೋಹರ್ ಲಾಲ್ ಖಟ್ಟರ್ ಮತ್ತು ದುಷ್ಯಂತ್ ಚೌತಾಲಾ ಅವರು ಯುವಕರ ಪತ್ರಿಕೆಗಳು ಮತ್ತು ಭವಿಷ್ಯವನ್ನು ಮಾರಾಟ ಮಾಡುತ್ತಿದ್ದಾರೆ. ಕಾಗದಪತ್ರಗಳನ್ನು ಬಿಡ್ ಮಾಡುವ ಮೂಲಕ ಮಾರುಕಟ್ಟೆಯಲ್ಲಿ ಬಹಿರಂಗವಾಗಿ ಮಾರಾಟ ಮಾಡುತ್ತಿದ್ದಾರೆ. ಹೀಗಾಗಿಯೇ ನಮಗೆ ಕೆಲಸ ಕೊಡಬೇಡಿ ಕನಿಷ್ಠ ಪರೀಕ್ಷೆ ಬರೆಯಲು ಅವಕಾಶ ಕೊಡಿ ಎಂದು ಜನರು ಒತ್ತಾಯಿಸುತ್ತಿದ್ದಾರೆ. ಆದರೆ ಅವಕಾಶವನ್ನೂ ಕಸಿದುಕೊಳ್ಳುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ಇನ್ನು ಮುಂದುವರೆದು ಮಾತನಾಡುತ್ತಾ, ‘ ಉದ್ಯೋಗ ಕೊಡಬೇಡಿ ಸ್ವಾಮಿ, ಕನಿಷ್ಠ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶ ನೀಡಿ. ಬಿಜೆಪಿ ಮತ್ತು ಜೆಜೆಪಿಯ ಜನರು ರಾಕ್ಷಸರು. ಬಿಜೆಪಿಗೆ ಮತ ಹಾಕುವ ಮತ್ತು ಅವರನ್ನು ಬೆಂಬಲಿಸುವವರೂ ರಾಕ್ಷಸರು. ಇಂದು ನಾನು ಈ ಮಹಾಭಾರತದ ಭೂಮಿಯಲ್ಲಿ ನಿಂತು ಶಪಿಸುತ್ತೇನೆ’ ಎಂದರು.

ಸುರ್ಜೆವಾಲಾ ಅವರ ಈ ಭಾಷಣದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಲವು ಬಿಜೆಪಿ ನಾಯಕರು ಅದನ್ನು ಶೇರ್ ಮಾಡಿದ್ದಾರೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರ ಸುರ್ಜೇವಾಲಾ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಈಗ ತನ್ನ ಪಕ್ಷಕ್ಕೆ ಮತ ಹಾಕುವ ಸಾರ್ವಜನಿಕರನ್ನು ಬಹಿರಂಗವಾಗಿ ನಿಂದಿಸುತ್ತಿದೆ ಎಂದು ಹೇಳಿದರು.

ಸುರ್ಜೆವಾಲಾ ಅವರು ತಮ್ಮ ಪಕ್ಷದ ವಿರುದ್ಧ ಮಾಡಿದ ಟೀಕೆಗಳ ಕುರಿತು ಸಿಎಂ ಶಿವರಾಜ್ ಚೌಹಾಣ್, ‘ಮನುಷ್ಯ ನಾಶವಾಗುವ ಕಾಲ ಬಂದಾಗ ಮೊದಲು ಬುದ್ದಿ ನಾಶವಾಗುತ್ತದೆ. ಕಾಂಗ್ರೆಸ್ ನಾಯಕರು ಸಾರ್ವಜನಿಕರನ್ನು ‘ರಾಕ್ಷಸರು’ ಎಂದು ಕರೆಯುತ್ತಿದ್ದಾರೆ. ಬಿಜೆಪಿಗೆ ಮತ ಹಾಕುವ ಕೋಟ್ಯಂತರ ಜನರು ರಾಕ್ಷಸರಾ? ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇದಕ್ಕೆ ಏನಂತಾರೆ? ನೀವು ಸಾರ್ವಜನಿಕರನ್ನು ರಾಕ್ಷಸರು ಎಂದು ಪರಿಗಣಿಸುತ್ತೀರಾ? ಬಿಜೆಪಿ ಸಾರ್ವಜನಿಕರನ್ನು ಭಗವಂತ ಎಂದು ಪರಿಗಣಿಸುತ್ತದೆ. ನಾನು ಯಾವಾಗಲೂ ಮಧ್ಯಪ್ರದೇಶ ನನ್ನ ದೇವಾಲಯ ಎಂದು ಹೇಳುತ್ತೇನೆ. ಇಲ್ಲಿ ವಾಸಿಸುವ ಜನರು ನನ್ನ ದೇವರು ಮತ್ತು ನಾವು ಆ ದೇವರ ಆರಾಧಕರು. ನೀವು ನಿಮ್ಮನ್ನು ದೇವರೆಂದು ಪರಿಗಣಿಸುತ್ತೀರಿ. ಇದು ನಿಮ್ಮ ‘ಮೊಹಬ್ಬತ್ ಕಿ ದುಕಾನ್’ ಎಂದು ತಿರುಗೇಟು ನೀಡಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

12 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

13 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

14 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

15 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

20 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

20 hours ago