ರಾಮನಗರ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಾಗಿ ಉಳಿದಿಲ್ಲ. ಅದೊಂದು ಮರಣ ಹೆದ್ದಾರಿಯಾಗಿ ರೂಪ ತಳೆದಿದೆ. ಆ ಕ್ರೆಡಿಟ್ ಅನ್ನು ಜಂಬ ಕೊಚ್ಚಿಕೊಳ್ಳುತ್ತಿರುವವರು ಪಡೆದುಕೊಳ್ಳಲಿ ಎಂದು ಬಿಜೆಪಿ ನಾಯಕರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 200ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 150ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯನ್ನು ಪ್ರಶ್ನಿಸಿದರು.
ನೀವು ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿರುವುದೇ ಇಷ್ಟೊಂದು ಸಾವು ಸಂಭವಿಸಲು ಕಾರಣವಾಗಿದೆ. ಇದರ ಹೊಣೆಯನ್ನು ಯಾರಾದರು ಹೊರುತ್ತಾರೆಯೇ. ಕೆಲವರು ಮಾಧ್ಯಮ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ನಾವೇ ರಸ್ತೆ ಮಾಡಿದ್ದು ಎಂದು ಜಂಬ ಕೊಚ್ಚಿಕೊಳ್ಳುತ್ತಾರೆ. ರಸ್ತೆ ನಿರ್ಮಾಣವಾಗಿದ್ದು ನಮ್ಮ ಹಣದಲ್ಲಿ. ಆದರೂ ರಸ್ತೆ ಮಾಡಿದ್ದಾಗಿ ಮಾತ್ರ ಹೇಳಿಕೊಳ್ಳುತ್ತಾರೆ. ಆ ಸಾವಿನ ಹೊಣೆ ಮಾತ್ರ ಹೊರಲ್ಲ. ಇದು ಹೈವೆಯಾಗಿ ಉಳಿದಿಲ್ಲ. ಮರಣ ಹೆದ್ದಾರಿ ಆಗಿದೆ. ಇದರ ಕ್ರೆಡಿಚ್ ಕೂಡ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ನಾಯಕರನ್ನು ಪರೋಕ್ಷವಾಗಿ ಟೀಕಿಸಿದರು.
ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸದಂತೆ ಮಾಡುವ ಹೊಣೆ ನಿಮ್ಮದು. ನೀವು ಏನು ಮಾಡುತ್ತೀರೊ ಗೊತ್ತಿಲ್ಲ. ಹೆದ್ದಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಸರ್ವಿಸ್ ರಸ್ತೆ, ತಂಗುದಾಣ, ಅಂಡರ್ ಪಾಸ್ ಸಮಸ್ಯೆ ಬಗೆಹರಿಸಬೇಕು ಎಂದು ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…