BREAKING NEWS

ಬೆಂಗ​ಳೂರು-ಮೈಸೂರು ಮರಣ ಹೆದ್ದಾ​ರಿ ಕ್ರೆಡಿಟ್‌ ಅನ್ನೂ ಬಿಜೆಪಿಯವರೇ ತೆಗೆದಕೊಳ್ಳಬೇಕು : ರಾಮ​ಲಿಂಗಾ​ರೆಡ್ಡಿ

ರಾಮ​ನ​ಗರ : ಬೆಂಗ​ಳೂರು – ಮೈಸೂರು ರಾಷ್ಟ್ರೀಯ ಹೆದ್ದಾ​ರಿಯಾಗಿ ಉಳಿ​ದಿಲ್ಲ. ಅದೊಂದು ಮರಣ ಹೆದ್ದಾ​ರಿ​ಯಾಗಿ ರೂಪ ತಳೆ​ದಿದೆ. ಆ ಕ್ರೆಡಿಟ್‌ ಅನ್ನು ಜಂಬ ಕೊಚ್ಚಿ​ಕೊ​ಳ್ಳು​ತ್ತಿ​ರು​ವ​ವರು ಪಡೆ​ದು​ಕೊ​ಳ್ಳಲಿ ಎಂದು ಬಿಜೆಪಿ ನಾಯ​ಕರ ವಿರುದ್ಧ ಜಿಲ್ಲಾ ಉಸ್ತು​ವಾರಿ ಸಚಿವ ರಾಮ​ಲಿಂಗಾ​ರೆಡ್ಡಿ ಕಿಡಿ​ಕಾ​ರಿ​ದ​ರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತ​ನಾ​ಡಿದ ಅವರು, ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 200ಕ್ಕೂ ಹೆಚ್ಚು ಅಪ​ಘಾ​ತ​ಗಳು ಸಂಭ​ವಿ​ಸಿದ್ದು, 150ಕ್ಕೂ ಹೆಚ್ಚು ಜನರು ಜೀವ ಕಳೆ​ದು​ಕೊಂಡಿ​ದ್ದಾರೆ. ಇದಕ್ಕೆ ಯಾರು ಹೊಣೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿ​ಕಾ​ರದ ಅಧಿ​ಕಾ​ರಿ​ಯನ್ನು ಪ್ರಶ್ನಿ​ಸಿ​ದರು.

ನೀವು ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿ​ರು​ವು​ದೇ ಇಷ್ಟೊಂದು ಸಾವು ಸಂಭ​ವಿ​ಸಲು ಕಾರ​ಣ​ವಾ​ಗಿದೆ. ಇದರ ಹೊಣೆಯನ್ನು ಯಾರಾ​ದರು ಹೊರು​ತ್ತಾರೆಯೇ. ಕೆಲವರು ಮಾಧ್ಯಮ ಹಾಗೂ ಸೋಶಿಯಲ್‌ ಮೀಡಿಯಾದಲ್ಲಿ ನಾವೇ ರಸ್ತೆ ಮಾಡಿದ್ದು ಎಂದು ಜಂಬ ಕೊಚ್ಚಿಕೊಳ್ಳುತ್ತಾರೆ. ರಸ್ತೆ ನಿರ್ಮಾ​ಣವಾಗಿದ್ದು ನಮ್ಮ ಹಣ​ದಲ್ಲಿ. ಆದರೂ ರಸ್ತೆ ಮಾಡಿ​ದ್ದಾಗಿ ಮಾತ್ರ ಹೇಳಿ​ಕೊ​ಳ್ಳು​ತ್ತಾರೆ. ಆ ಸಾವಿನ ಹೊಣೆ ಮಾತ್ರ ಹೊರಲ್ಲ. ಇದು ಹೈವೆಯಾಗಿ ಉಳಿ​ದಿ​ಲ್ಲ. ಮರಣ ಹೆದ್ದಾರಿ ಆಗಿದೆ. ಇದರ ಕ್ರೆಡಿಚ್‌ ಕೂಡ ಅವ​ರಿಗೆ ಸಲ್ಲುತ್ತದೆ ಎಂದು ಬಿಜೆಪಿ ನಾಯ​ಕರನ್ನು ಪರೋ​ಕ್ಷ​ವಾಗಿ ಟೀಕಿ​ಸಿ​ದರು.

ಹೆದ್ದಾ​ರಿ​ಯಲ್ಲಿ ಅಪ​ಘಾ​ತ​ಗಳು ಸಂಭ​ವಿ​ಸ​ದಂತೆ ಮಾಡುವ ಹೊಣೆ ನಿಮ್ಮದು. ನೀವು ಏನು ಮಾಡು​ತ್ತೀರೊ ಗೊತ್ತಿಲ್ಲ. ಹೆದ್ದಾ​ರಿ​ಯನ್ನು ವೈಜ್ಞಾ​ನಿ​ಕ​ವಾಗಿ ಮಾಡ​ಬೇಕು. ಸರ್ವಿಸ್‌ ರಸ್ತೆ, ತಂಗು​ದಾಣ, ಅಂಡರ್‌ ಪಾಸ್‌ ಸಮಸ್ಯೆ ಬಗೆ​ಹ​ರಿ​ಸ​ಬೇಕು ಎಂದು ರಾಮ​ಲಿಂಗಾ​ರೆಡ್ಡಿ ಸೂಚನೆ ನೀಡಿ​ದ​ರು.

lokesh

Recent Posts

ಫೆ.17ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್‌ ಪ್ರಮಾಣವಚನ ಸ್ವೀಕಾರ: ಪ್ರಧಾನಿ ಮೋದಿಗೆ ಆಹ್ವಾನ

ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್‌ ರೆಹಮಾನ್‌ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…

1 hour ago

ಮಾದಪ್ಪನ ದರ್ಶನ ಪಡೆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ…

1 hour ago

ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಸಿಐಡಿ ಕಸ್ಟಡಿಗೆ

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…

2 hours ago

ಸಾಲೂರು ಮಠಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪತ್ನಿ ಉಷಾ ಶಿವಕುಮಾರ್‌ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…

2 hours ago

ನಂಜನಗೂಡು ತಾಯಿ-ಮಕ್ಕಳ ಆಸ್ಪತ್ರೆಗೆ ಶಾಸಕ ದರ್ಶನ್ ದಿಢೀರ್ ಭೇಟಿ, ಪರಿಶೀಲನೆ

ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…

2 hours ago

ಯತೀಂದ್ರ ಸಿದ್ದರಾಮಯ್ಯ ನಮ್ಮ ಹೈಕಮಾಂಡ್:‌ ಗಣಿಗ ರವಿಕುಮಾರ್‌ ವ್ಯಂಗ್ಯ

ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್.‌ ನಮಗೆ ಹೈಕಮಾಂಡ್‌ ನೋಟಿಸ್‌ ಕೊಡಬಹುದು. ಆದರೆ ಹೈಕಮಾಂಡ್‌ಗೆ ನಾವು ನೋಟಿಸ್‌ ಕೊಡಲು…

2 hours ago