BREAKING NEWS

ಬೆಂಗ​ಳೂರು-ಮೈಸೂರು ಮರಣ ಹೆದ್ದಾ​ರಿ ಕ್ರೆಡಿಟ್‌ ಅನ್ನೂ ಬಿಜೆಪಿಯವರೇ ತೆಗೆದಕೊಳ್ಳಬೇಕು : ರಾಮ​ಲಿಂಗಾ​ರೆಡ್ಡಿ

ರಾಮ​ನ​ಗರ : ಬೆಂಗ​ಳೂರು – ಮೈಸೂರು ರಾಷ್ಟ್ರೀಯ ಹೆದ್ದಾ​ರಿಯಾಗಿ ಉಳಿ​ದಿಲ್ಲ. ಅದೊಂದು ಮರಣ ಹೆದ್ದಾ​ರಿ​ಯಾಗಿ ರೂಪ ತಳೆ​ದಿದೆ. ಆ ಕ್ರೆಡಿಟ್‌ ಅನ್ನು ಜಂಬ ಕೊಚ್ಚಿ​ಕೊ​ಳ್ಳು​ತ್ತಿ​ರು​ವ​ವರು ಪಡೆ​ದು​ಕೊ​ಳ್ಳಲಿ ಎಂದು ಬಿಜೆಪಿ ನಾಯ​ಕರ ವಿರುದ್ಧ ಜಿಲ್ಲಾ ಉಸ್ತು​ವಾರಿ ಸಚಿವ ರಾಮ​ಲಿಂಗಾ​ರೆಡ್ಡಿ ಕಿಡಿ​ಕಾ​ರಿ​ದ​ರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತ​ನಾ​ಡಿದ ಅವರು, ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 200ಕ್ಕೂ ಹೆಚ್ಚು ಅಪ​ಘಾ​ತ​ಗಳು ಸಂಭ​ವಿ​ಸಿದ್ದು, 150ಕ್ಕೂ ಹೆಚ್ಚು ಜನರು ಜೀವ ಕಳೆ​ದು​ಕೊಂಡಿ​ದ್ದಾರೆ. ಇದಕ್ಕೆ ಯಾರು ಹೊಣೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿ​ಕಾ​ರದ ಅಧಿ​ಕಾ​ರಿ​ಯನ್ನು ಪ್ರಶ್ನಿ​ಸಿ​ದರು.

ನೀವು ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿ​ರು​ವು​ದೇ ಇಷ್ಟೊಂದು ಸಾವು ಸಂಭ​ವಿ​ಸಲು ಕಾರ​ಣ​ವಾ​ಗಿದೆ. ಇದರ ಹೊಣೆಯನ್ನು ಯಾರಾ​ದರು ಹೊರು​ತ್ತಾರೆಯೇ. ಕೆಲವರು ಮಾಧ್ಯಮ ಹಾಗೂ ಸೋಶಿಯಲ್‌ ಮೀಡಿಯಾದಲ್ಲಿ ನಾವೇ ರಸ್ತೆ ಮಾಡಿದ್ದು ಎಂದು ಜಂಬ ಕೊಚ್ಚಿಕೊಳ್ಳುತ್ತಾರೆ. ರಸ್ತೆ ನಿರ್ಮಾ​ಣವಾಗಿದ್ದು ನಮ್ಮ ಹಣ​ದಲ್ಲಿ. ಆದರೂ ರಸ್ತೆ ಮಾಡಿ​ದ್ದಾಗಿ ಮಾತ್ರ ಹೇಳಿ​ಕೊ​ಳ್ಳು​ತ್ತಾರೆ. ಆ ಸಾವಿನ ಹೊಣೆ ಮಾತ್ರ ಹೊರಲ್ಲ. ಇದು ಹೈವೆಯಾಗಿ ಉಳಿ​ದಿ​ಲ್ಲ. ಮರಣ ಹೆದ್ದಾರಿ ಆಗಿದೆ. ಇದರ ಕ್ರೆಡಿಚ್‌ ಕೂಡ ಅವ​ರಿಗೆ ಸಲ್ಲುತ್ತದೆ ಎಂದು ಬಿಜೆಪಿ ನಾಯ​ಕರನ್ನು ಪರೋ​ಕ್ಷ​ವಾಗಿ ಟೀಕಿ​ಸಿ​ದರು.

ಹೆದ್ದಾ​ರಿ​ಯಲ್ಲಿ ಅಪ​ಘಾ​ತ​ಗಳು ಸಂಭ​ವಿ​ಸ​ದಂತೆ ಮಾಡುವ ಹೊಣೆ ನಿಮ್ಮದು. ನೀವು ಏನು ಮಾಡು​ತ್ತೀರೊ ಗೊತ್ತಿಲ್ಲ. ಹೆದ್ದಾ​ರಿ​ಯನ್ನು ವೈಜ್ಞಾ​ನಿ​ಕ​ವಾಗಿ ಮಾಡ​ಬೇಕು. ಸರ್ವಿಸ್‌ ರಸ್ತೆ, ತಂಗು​ದಾಣ, ಅಂಡರ್‌ ಪಾಸ್‌ ಸಮಸ್ಯೆ ಬಗೆ​ಹ​ರಿ​ಸ​ಬೇಕು ಎಂದು ರಾಮ​ಲಿಂಗಾ​ರೆಡ್ಡಿ ಸೂಚನೆ ನೀಡಿ​ದ​ರು.

lokesh

Recent Posts

ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಇಲ್ಲಿನ ಯಲಹಂಕ, ಫಕೀರ್‌ ಕಾಲೋನಿ ಹಾಗೂ ವಸೀಮ್‌ ಲೇಔಟ್‌ನಲ್ಲಿರುವ ಮುಸ್ಲಿಂ ವಸತಿಗಳ ತೆರವು ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಬುಲ್ಡೋಜರ್‌…

19 mins ago

ಪೈರಸಿ ಬಗ್ಗೆ ಮತ್ತೊಮ್ಮೆ ಖಡಕ್‌ ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್‌

ಬೆಂಗಳೂರು: ನಟ ಕಿಚ್ಚ ಸುದೀಪ್‌ ಅಭಿನಯದ ಮಾರ್ಕ್‌ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಮಾರ್ಕ್‌ ಚಿತ್ರಕ್ಕೂ ಪೈರಸಿ…

50 mins ago

ಜೆಡಿಎಸ್‌ ಜೊತೆ ಮೈತ್ರಿ ವಿಚಾರ: ವರಿಷ್ಠರ ತೀರ್ಮಾನಕ್ಕೆ ಬದ್ಧ ಎಂದ ವಿಜಯೇಂದ್ರ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಕಷ್ಟ ಎಂದು ಮಾಜಿ ಎಚ್‌ಡಿಡಿ ಹೇಳಿಕೆ ಕುರಿತು ಬಿಜೆಪಿ…

1 hour ago

ಹೆಸರುಘಟ್ಟ ನೈಸರ್ಗಿಕ ಹುಲ್ಲುಗಾವಲು ಸಂರಕ್ಷಣೆಗೆ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಸರ್ಕಾರ ಕೆಲವು ತಿಂಗಳ ಹಿಂದೆ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಹೆಸರುಘಟ್ಟ ಕೆರೆ ಸೇರಿದಂತೆ 5678 ಎಕರೆ ಹುಲ್ಲುಗಾವಲು…

3 hours ago

ಕಾಸರಗೋಡು| ಹಳಿ ದಾಟುವಾಗ ರೈಲು ರಿಕ್ಕಿ: ಕೊಡಗು ಮೂಲದ ಯುವಕ ಸಾವು

ಕಾಸರಗೋಡು: ಹಳಿ ದಾಟುವಾಗ ಯುವಕ ಸಾವನ್ನಪ್ಪಿರುವ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ಜಿಲ್ಲೆ ಗೋಣಿಮಾಗೂರಿನ ಸೋಮವಾರಪುರದ ಚೆನ್ನಯ್ಯ ಅವರ…

3 hours ago

ಉತ್ತರ ಪ್ರದೇಶದಂತೆ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆ ಧ್ವಂಸ: ಕರ್ನಾಟಕದ ವಿರುದ್ಧ ಪಿಣರಾಯಿ ವಿಜಯನ್‌ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬುಲ್ಡೋಜರ್‌ ಬಳಸಿ ಮುಸ್ಲಿಮರ ಮನೆಗಳನ್ನು ಧ್ವಂಸ ಮಾಡಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್‌ ಕಾಂಗ್ರೆಸ್‌ ಸರ್ಕಾರದ…

3 hours ago