BREAKING NEWS

ಬೆಂಗ​ಳೂರು-ಮೈಸೂರು ಮರಣ ಹೆದ್ದಾ​ರಿ ಕ್ರೆಡಿಟ್‌ ಅನ್ನೂ ಬಿಜೆಪಿಯವರೇ ತೆಗೆದಕೊಳ್ಳಬೇಕು : ರಾಮ​ಲಿಂಗಾ​ರೆಡ್ಡಿ

ರಾಮ​ನ​ಗರ : ಬೆಂಗ​ಳೂರು – ಮೈಸೂರು ರಾಷ್ಟ್ರೀಯ ಹೆದ್ದಾ​ರಿಯಾಗಿ ಉಳಿ​ದಿಲ್ಲ. ಅದೊಂದು ಮರಣ ಹೆದ್ದಾ​ರಿ​ಯಾಗಿ ರೂಪ ತಳೆ​ದಿದೆ. ಆ ಕ್ರೆಡಿಟ್‌ ಅನ್ನು ಜಂಬ ಕೊಚ್ಚಿ​ಕೊ​ಳ್ಳು​ತ್ತಿ​ರು​ವ​ವರು ಪಡೆ​ದು​ಕೊ​ಳ್ಳಲಿ ಎಂದು ಬಿಜೆಪಿ ನಾಯ​ಕರ ವಿರುದ್ಧ ಜಿಲ್ಲಾ ಉಸ್ತು​ವಾರಿ ಸಚಿವ ರಾಮ​ಲಿಂಗಾ​ರೆಡ್ಡಿ ಕಿಡಿ​ಕಾ​ರಿ​ದ​ರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತ​ನಾ​ಡಿದ ಅವರು, ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 200ಕ್ಕೂ ಹೆಚ್ಚು ಅಪ​ಘಾ​ತ​ಗಳು ಸಂಭ​ವಿ​ಸಿದ್ದು, 150ಕ್ಕೂ ಹೆಚ್ಚು ಜನರು ಜೀವ ಕಳೆ​ದು​ಕೊಂಡಿ​ದ್ದಾರೆ. ಇದಕ್ಕೆ ಯಾರು ಹೊಣೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿ​ಕಾ​ರದ ಅಧಿ​ಕಾ​ರಿ​ಯನ್ನು ಪ್ರಶ್ನಿ​ಸಿ​ದರು.

ನೀವು ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿ​ರು​ವು​ದೇ ಇಷ್ಟೊಂದು ಸಾವು ಸಂಭ​ವಿ​ಸಲು ಕಾರ​ಣ​ವಾ​ಗಿದೆ. ಇದರ ಹೊಣೆಯನ್ನು ಯಾರಾ​ದರು ಹೊರು​ತ್ತಾರೆಯೇ. ಕೆಲವರು ಮಾಧ್ಯಮ ಹಾಗೂ ಸೋಶಿಯಲ್‌ ಮೀಡಿಯಾದಲ್ಲಿ ನಾವೇ ರಸ್ತೆ ಮಾಡಿದ್ದು ಎಂದು ಜಂಬ ಕೊಚ್ಚಿಕೊಳ್ಳುತ್ತಾರೆ. ರಸ್ತೆ ನಿರ್ಮಾ​ಣವಾಗಿದ್ದು ನಮ್ಮ ಹಣ​ದಲ್ಲಿ. ಆದರೂ ರಸ್ತೆ ಮಾಡಿ​ದ್ದಾಗಿ ಮಾತ್ರ ಹೇಳಿ​ಕೊ​ಳ್ಳು​ತ್ತಾರೆ. ಆ ಸಾವಿನ ಹೊಣೆ ಮಾತ್ರ ಹೊರಲ್ಲ. ಇದು ಹೈವೆಯಾಗಿ ಉಳಿ​ದಿ​ಲ್ಲ. ಮರಣ ಹೆದ್ದಾರಿ ಆಗಿದೆ. ಇದರ ಕ್ರೆಡಿಚ್‌ ಕೂಡ ಅವ​ರಿಗೆ ಸಲ್ಲುತ್ತದೆ ಎಂದು ಬಿಜೆಪಿ ನಾಯ​ಕರನ್ನು ಪರೋ​ಕ್ಷ​ವಾಗಿ ಟೀಕಿ​ಸಿ​ದರು.

ಹೆದ್ದಾ​ರಿ​ಯಲ್ಲಿ ಅಪ​ಘಾ​ತ​ಗಳು ಸಂಭ​ವಿ​ಸ​ದಂತೆ ಮಾಡುವ ಹೊಣೆ ನಿಮ್ಮದು. ನೀವು ಏನು ಮಾಡು​ತ್ತೀರೊ ಗೊತ್ತಿಲ್ಲ. ಹೆದ್ದಾ​ರಿ​ಯನ್ನು ವೈಜ್ಞಾ​ನಿ​ಕ​ವಾಗಿ ಮಾಡ​ಬೇಕು. ಸರ್ವಿಸ್‌ ರಸ್ತೆ, ತಂಗು​ದಾಣ, ಅಂಡರ್‌ ಪಾಸ್‌ ಸಮಸ್ಯೆ ಬಗೆ​ಹ​ರಿ​ಸ​ಬೇಕು ಎಂದು ರಾಮ​ಲಿಂಗಾ​ರೆಡ್ಡಿ ಸೂಚನೆ ನೀಡಿ​ದ​ರು.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

2 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

2 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

3 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

5 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

8 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

8 hours ago