ರಾಮನಗರ : ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಾಗಿ ಉಳಿದಿಲ್ಲ. ಅದೊಂದು ಮರಣ ಹೆದ್ದಾರಿಯಾಗಿ ರೂಪ ತಳೆದಿದೆ. ಆ ಕ್ರೆಡಿಟ್ ಅನ್ನು ಜಂಬ ಕೊಚ್ಚಿಕೊಳ್ಳುತ್ತಿರುವವರು ಪಡೆದುಕೊಳ್ಳಲಿ ಎಂದು ಬಿಜೆಪಿ ನಾಯಕರ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಕಿಡಿಕಾರಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ 200ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿದ್ದು, 150ಕ್ಕೂ ಹೆಚ್ಚು ಜನರು ಜೀವ ಕಳೆದುಕೊಂಡಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯನ್ನು ಪ್ರಶ್ನಿಸಿದರು.
ನೀವು ಅವೈಜ್ಞಾನಿಕವಾಗಿ ರಸ್ತೆ ನಿರ್ಮಾಣ ಮಾಡಿರುವುದೇ ಇಷ್ಟೊಂದು ಸಾವು ಸಂಭವಿಸಲು ಕಾರಣವಾಗಿದೆ. ಇದರ ಹೊಣೆಯನ್ನು ಯಾರಾದರು ಹೊರುತ್ತಾರೆಯೇ. ಕೆಲವರು ಮಾಧ್ಯಮ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ನಾವೇ ರಸ್ತೆ ಮಾಡಿದ್ದು ಎಂದು ಜಂಬ ಕೊಚ್ಚಿಕೊಳ್ಳುತ್ತಾರೆ. ರಸ್ತೆ ನಿರ್ಮಾಣವಾಗಿದ್ದು ನಮ್ಮ ಹಣದಲ್ಲಿ. ಆದರೂ ರಸ್ತೆ ಮಾಡಿದ್ದಾಗಿ ಮಾತ್ರ ಹೇಳಿಕೊಳ್ಳುತ್ತಾರೆ. ಆ ಸಾವಿನ ಹೊಣೆ ಮಾತ್ರ ಹೊರಲ್ಲ. ಇದು ಹೈವೆಯಾಗಿ ಉಳಿದಿಲ್ಲ. ಮರಣ ಹೆದ್ದಾರಿ ಆಗಿದೆ. ಇದರ ಕ್ರೆಡಿಚ್ ಕೂಡ ಅವರಿಗೆ ಸಲ್ಲುತ್ತದೆ ಎಂದು ಬಿಜೆಪಿ ನಾಯಕರನ್ನು ಪರೋಕ್ಷವಾಗಿ ಟೀಕಿಸಿದರು.
ಹೆದ್ದಾರಿಯಲ್ಲಿ ಅಪಘಾತಗಳು ಸಂಭವಿಸದಂತೆ ಮಾಡುವ ಹೊಣೆ ನಿಮ್ಮದು. ನೀವು ಏನು ಮಾಡುತ್ತೀರೊ ಗೊತ್ತಿಲ್ಲ. ಹೆದ್ದಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಸರ್ವಿಸ್ ರಸ್ತೆ, ತಂಗುದಾಣ, ಅಂಡರ್ ಪಾಸ್ ಸಮಸ್ಯೆ ಬಗೆಹರಿಸಬೇಕು ಎಂದು ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…