BREAKING NEWS

ಐಟಿ, ಇಡಿ, ಸಿಬಿಐ ಹೆಸರಿನಲ್ಲಿ ಶೆಟ್ಟರ್‌ಗೆ ಬಿಜೆಪಿ ಬೆದರಿಕೆ: ಕಾಂಗ್ರೆಸ್ ಕಿಡಿ

ಬೆಂಗಳೂರು : ಬಿಜೆಪಿ ಪ್ರಲ್ಹಾದ್ ಜೋಷಿ ಅವರನ್ನು ಶೆಟ್ಟರ್ ಅವರ ಮನೆಗೆ ಕಳುಹಿಸಿ ಐಟಿ, ಇಡಿ, ಸಿಬಿಐಗಳ ಹೆಸರಿನಲ್ಲಿ ಬೆದರಿಸುವ ಕೆಲಸ ಮಾಡಿದೆ ಎಂದು ಕಾಂಗ್ರೆಸ್ ಟೀಕಿಸಿದೆ.

ಒಬ್ಬ ಹಿರಿಯ ರಾಜಕಾರಣಿಗೆ ಬೆದರಿಕೆ ಹಾಕಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಸಿ ಬಳಿಯುವ ಪ್ರಯತ್ನ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. ಪ್ರಲ್ಹಾದ್ ಜೋಷಿ ಅವರು ಕೂಡಲೇ ಶೆಟ್ಟರ್ ಹಾಗೂ ರಾಜ್ಯದ ಜನರ ಕ್ಷಮೆ ಕೇಳಬೇಕು ಎಮದು ಅದು ಒತ್ತಾಯಿಸಿದೆ.

ಈ ಕುರಿತಂತೆ ಕಾಂಗ್ರೆಸ್ ಮುಖಂಡ  ರಮೇಶ್ ಬಾಬು ಮಾತನಾಡಿರುವ ವಿಡಿಯೊವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ಹೆಸರಲ್ಲಿ ಜಗಜ್ಯೋತಿ ಬಸವಣ್ಣರನ್ನು ಅವಮಾನಿಸಿದ್ದೂ ಅಲ್ಲದೆ ಅಕ್ಕಮಹಾದೇವಿ ಸೇರಿದಂತೆ ಶರಣರ ವಚನಗಳನ್ನು ಪಠ್ಯದಿಂದ ಕೈಬಿಟ್ಟು ಅವಮಾನಿಸಿತ್ತು ಲಿಂಗಾಯತವಿರೋಧಿಬಿಜೆಪಿ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಸಮಾನತೆ, ಸಾಮರಸ್ಯವನ್ನು ಸಾರುವ ಲಿಂಗಾಯತ ತತ್ವವೆಂದರೆ ಬಿಜೆಪಿಗೆ ಮೊದಲಿಂದಲೂ ಅಸಹನೆ ಇದೆ. ಈಗ ಆ ಅಸಹನೆ ರಾಜಕೀಯ ನಾಯಕರ ಮೇಲೆ ತಿರುಗಿದೆ ಎಂದು ಟೀಕಿಸಿದೆ.

lokesh

Recent Posts

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

33 mins ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

35 mins ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

43 mins ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

56 mins ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

1 hour ago

ನರೇಗಾಗೆ ಯಾವ ಹೆಸರನ್ನು ಬೇಕಾದರು ಇಡಲಿ ; ಅಭ್ಯಂತರ ಇಲ್ಲ : ಸಚಿವ ಪ್ರಿಯಾಂಕ ಖರ್ಗೆ

ಗ್ರಾಮಗಳಲ್ಲಿ ಉದ್ಯೋಗ ಸೃಷ್ಟಿ ಮಾಡಲಿ : ಖರ್ಗೆ ಬೆಂಗಳೂರು : ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಗೆ ಮಹಾತ್ಮ ಗಾಂಧೀಜಿ ಅವರ…

1 hour ago