ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ನಡೆಯ ವಿರುದ್ಧ ಕಿಡಿಕಾರಿದ್ದಾರೆ. ಕರಸೇವಕರ ಬಂಧನವನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿಕೆಯನ್ನು ನೀಡಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯವಾದ ಜಗನ್ನಾಥ ಭವನದಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ ರಾಜ್ಯ ಕಾಂಗ್ರೆಸ್ ಸರ್ಕಾರ ತಾನು ಹಿಂದೂ ವಿರೋಧಿ ಎಂಬುದನ್ನು ದೇಶದ ಹಾಗೂ ರಾಜ್ಯದ ಜನತೆಗೆ ನೆನಪು ಮಾಡುತ್ತಿದೆ ಎಂದಿದ್ದಾರೆ.
ಹುಬ್ಬಳ್ಳಿಯಲ್ಲಿ 31 ವರ್ಷಗಳ ಹಳೆಯ ಪ್ರಕರಣವನ್ನು ಮತ್ತೆ ರಿ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.
ಈ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗುತ್ತಿದೆ. ಈ ಶುಭ ಸಂದರ್ಭದಲ್ಲಿ ದೇಶ ಹಾಗೂ ರಾಜ್ಯದ ಜನತೆ ಸಂತಸದಲ್ಲಿದ್ದು, ದೇಶದಾದ್ಯಂತ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಇಂಥ ಸಂದರ್ಭವನ್ನು ಆರಿಸಿ ಶ್ರೀಕಾಂತ್ ಪೂಜಾರಿ ಅವರನ್ನು ಹಳೆ ಕೇಸ್ ರಿ ಓಪನ್ ಮಾಡುವ ಮೂಲಕ ಕಾಂಗ್ರೆಸ್ ತಾನು ಹಿಂದೂ ವಿರೋಧಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿಕೊಂಡಿದೆ ಎಂದು ಬಿ ವೈ ವಿಜಯೇಂದ್ರ ಕಿಡಿಕಾರಿದರು.
ಕಾಂಗ್ರೆಸ್ನ ಈ ನಡೆ ಖಂಡನೀಯ. ಹೀಗಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ನಲ್ಲಿ ಮಾತ್ರವಲ್ಲದೇ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳಲ್ಲಿಯೂ ಸಹ ಪ್ರತಿಭಟನೆ ನಡೆಯಲಿದೆ ಎಂದರು.
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…
ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…
ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ ಸಿದ್ದಾಪುರ:ಸಿದ್ದಾಪುರ ಪೊಲೀಸ್…
ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…