ಸುಳ್ಯ (ದಕ್ಷಿಣ ಕನ್ನಡ): ಪಕ್ಷದಿಂದ ಟಿಕೆಟ್ ದೊರೆಯದಿದ್ದಾಗ ಆ ಕ್ಷಣದಲ್ಲಿ ಉದ್ವೇಗದಿಂದ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದೆ. ಆದರೆ ಈಗ ನನ್ನ ಯೋಚನೆ ಹಾಗಿಲ್ಲ. ಪಕ್ಷ ನನಗೆ ಸಾಕಷ್ಟು ಅವಕಾಶ ಕೊಟ್ಟಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ’ ಎಂದು ಶಾಸಕ ಎಸ್. ಅಂಗಾರ ಹೇಳಿದರು.
ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲುವು ಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಅಭ್ಯರ್ಥಿ ಭಾಗೀರಥಿ ಮುರುಳ್ಯ ಗೆಲುವಿಗೆ ಶ್ರಮಿಸುತ್ತೇನೆ ಮತ್ತು ಗೆಲುವಿನ ಜವಬ್ಧಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ’ ಎಂದರು.
ಸುಳ್ಯ ಮೀಸಲು ಕ್ಷೇತ್ರದಿಂದ ಆರು ಬಾರಿ ಆಯ್ಕೆಯಾಗಿದ್ದ ಅಂಗಾರ ಅವರು, ಬಿಜೆಪಿ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ, ‘ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ. ನಾನು ಇನ್ನು ರಾಜಕಾರಣದಲ್ಲೂ ಇಲ್ಲ, ಚುನಾವಣಾ ಕಣದಲ್ಲೂ ಇಲ್ಲ. ಹೊಸ ಅಭ್ಯರ್ಥಿ ಮತ್ತು ಅವರ ಗೆಲುವನ್ನು ಪಕ್ಷ ನೋಡಿಕೊಳ್ಳಬಹುದು’ ಎಂದು ಹೇಳಿದ್ದರು. ಈ ಹೇಳಿಕೆ ಬಿಜೆಪಿ ವಲಯದಲ್ಲಿ ವ್ಯಾಪಕ ಟೀಕೆಗೆ ಒಳಗಾಗಿತ್ತು.
ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…
ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…
ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ…
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…
ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…
ಲಕ್ನೋ: ಚಂಡಮಾರುತಕ್ಕೆ ಸಿಕಿ ಬೆಟ್ಟಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು 6 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ…