BREAKING NEWS

ಗಾಂಧಿಯನ್ನ ಕೊಂದ ಬಿಜೆಪಿಯವರು ಗೋಡ್ಸೆ ಪ್ರತಿಮೆ ಮುಂದೆ ಧರಣಿ ಮಾಡಬೇಕಿತ್ತು: ಸಿದ್ದರಾಮಯ್ಯ

ಬೆಂಗಳೂರು : ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಶಾಸಕರು ಧರಣಿ ನಡೆಸಬೇಕಾಗಿದ್ದು ಮಹಾತ್ಮ ಗಾಂಧಿ ಪ್ರತಿಮೆಯ ಮುಂದಲ್ಲ, ಬದಲಾಗಿ ನಾಥುರಾಂ ಗೋಡ್ಸೆ ಪ್ರತಿಮೆಯ ಮುಂದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ಗಾಂಧಿ ಕೊಂದವರು ಅದೇ ಪ್ರತಿಮೆ ಮುಂದೆ ನ್ಯಾಯ ಕೊಡಿಸಿ ಎನ್ನುವುದು ಎಂತಹ ವಿಪರ್ಯಾಸ ಎಂದು ಕಿಡಿಕಾರಿದರು.

ಬರೀ ಸುಳ್ಳು ಹೇಳುವವರು, ಘರ್ಷಣೆ ಉಂಟು ಮಾಡುವವರು, ಸಮಾಜ ಒಡೆಯುವವರು ಈಗ ಹೋಗಿ ಗಾಂಧಿ ಮುಂದೆ ಕೂತಿದ್ದಾರೆ. ಬಿಜೆಪಿಯವರಿಗೆ ನೈತಿಕತೆ ಇದೆಯಾ? ಎಂದು ಪ್ರಶ್ನಿಸಿದರು.

ವಿಪಕ್ಷ ಟೀಕೆ ಮಾಡುವುದು ಹಾಗೂ ಬಾವಿಗಿಳಿಯುವುದು ಸರ್ಕಾರದ ಗಮನ ಸೆಳೆಯುವುದು ಅವರ ಹಕ್ಕು. ವಿಧಾನಸಭೆಯಲ್ಲಿ ಅವರು ನಡೆದುಕೊಂಡ ರೀತಿಯಿಂದ ಕೆಲವರನ್ನು ಅಮಾನತು ಮಾಡಿದ್ದಾರೆ. ಅನಾಗರಿಕ ವರ್ತನೆ ಮಾಡಿದ್ದಾರೆ. ದಲಿತ ಡೆಪ್ಯುಟಿ ಸ್ಪೀಕರ್ ಮೇಲೆ ಅಮಾನುಷವಾಗಿ ನಡೆದುಕೊಂಡಿದ್ದಾರೆ.‌ ಮಾರ್ಷಲ್ ಇಲ್ಲದಿದ್ದರೆ ಏನು ಮಾಡ್ತಿದ್ರೋ ಏನೋ? ಎಂದು ಆತಂಕ ವ್ಯಕ್ತಪಡಿಸಿದರು.

ಅದಕ್ಕಾಗಿ ಅವರನ್ನು ಅಮಾನತು ಮಾಡಲಾಗಿದೆ.‌ ಸದನದಲ್ಲಿ ಒಂದು ಶಿಸ್ತು ಇರಬೇಕಲ್ಲ.‌ ಪರಿಷತ್ ಗೆ ಬಿಜೆಪಿಯವರು ಹಾಜರಾಗಬಹುದಿತ್ತು. ಇಲ್ಲೇನೂ ಗಲಾಟೆ ಆಗಿರಲಿಲ್ಲ ಎಂದರು.

ಜೆಡಿಎಸ್ ನವರು ಯಾಕೆ ಬಿಜೆಪಿಯವರ ಜೊತೆಗೆ ಸೇರಿಕೊಂಡರೋ ಗೊತ್ತಿಲ್ಲ. ವಿಧೇಯಕಗಳನ್ನು ಅಂಗೀಕಾರ ಆಗದಂತೆ ಮಾಡೋದಕ್ಕೂ ಜೆಡಿಎಸ್ ಬಿಜೆಪಿ ಜೊತೆಗೆ ಸೇರಿಕೊಳ್ತಾರೆ. ಮರಿತಿಬ್ಬೇಗೌಡ ಟೆಕ್ನಿಕಲಿ ಜೆಡಿಎಸ್, ಆದರೆ ಜೆಡಿಎಸ್ ವಿರೋಧಿ ಅವರು. ಕಾರಣ ಇಲ್ಲದೆಯೇ ಬಿಜೆಪಿ ಹಾಗೂ ಜೆಡಿಎಸ್ ಗೈರಾಗಿದ್ದಾರೆ. ಬೇಜವಾವ್ದಾರಿಗಳು- ಜನ ವಿರೋಧಿಗಳು ಬಿಜೆಪಿ ಜೆಡಿಎಸ್ ನವರು ಎಂದು ಕಿಡಿಕಾರಿದರು.

ಬಜೆಟ್ ಮೇಲೆ ಬೆಳಕು ಚೆಲ್ಲಿದ್ದರೆ ನನಗೆ ಅನುಕೂಲ ಆಗ್ತಾ ಇತ್ತು. ಇಬ್ಬರೇ ಇಬ್ಬರು ಬಿಜೆಪಿಯವರು ಬಜೆಟ್ ಮೇಲೆ ಮಾತನಾಡಿದ್ದಾರೆ.
ಬಜೆಟ್ ಮೇಲೆ ಚರ್ಚೆ ಮಾಡೋದಕ್ಕೆ ಗೈರು ಆಗ್ತಾರೆ. ಪ್ರಜಾಪ್ರಭುತ್ವ ಹಾಗೂ ಜನವಿರೋಧಿಗಳು ಇವರಿಬ್ಬರು ಎಂದು ವಾಗ್ದಾಳಿ ನಡೆಸಿದರು.

andolanait

Recent Posts

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

7 mins ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

1 hour ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

2 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

2 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

2 hours ago

ಮುಡಾ ಪ್ರಕರಣ: ಮುಡಾ ಕಚೇರಿಯ ಮೇಲೆ ಇ.ಡಿ ದಾಳಿ

ಮೈಸೂರು: ಮುಡಾದಲ್ಲಿ ಹಗರಣ ನಡೆದಿದೆ ಎಂದು ಆರ್‌ಐಟಿ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇ.ಡಿ.ಗೆ ದೂರು ನೀಡಿದ್ದರು. ಈ ದೂರಿನ ಆಧಾರದ…

3 hours ago