ಬೆಂಗಳೂರು : ಶಾಸಕರ ಅಮಾನತು ವಿರೋಧಿಸಿ ಬಿಜೆಪಿ ಶಾಸಕರು ಧರಣಿ ನಡೆಸಬೇಕಾಗಿದ್ದು ಮಹಾತ್ಮ ಗಾಂಧಿ ಪ್ರತಿಮೆಯ ಮುಂದಲ್ಲ, ಬದಲಾಗಿ ನಾಥುರಾಂ ಗೋಡ್ಸೆ ಪ್ರತಿಮೆಯ ಮುಂದೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ವಿಧಾನಪರಿಷತ್ ನಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿದ್ದರಾಮಯ್ಯ, ಗಾಂಧಿ ಕೊಂದವರು ಅದೇ ಪ್ರತಿಮೆ ಮುಂದೆ ನ್ಯಾಯ ಕೊಡಿಸಿ ಎನ್ನುವುದು ಎಂತಹ ವಿಪರ್ಯಾಸ ಎಂದು ಕಿಡಿಕಾರಿದರು.
ಬರೀ ಸುಳ್ಳು ಹೇಳುವವರು, ಘರ್ಷಣೆ ಉಂಟು ಮಾಡುವವರು, ಸಮಾಜ ಒಡೆಯುವವರು ಈಗ ಹೋಗಿ ಗಾಂಧಿ ಮುಂದೆ ಕೂತಿದ್ದಾರೆ. ಬಿಜೆಪಿಯವರಿಗೆ ನೈತಿಕತೆ ಇದೆಯಾ? ಎಂದು ಪ್ರಶ್ನಿಸಿದರು.
ವಿಪಕ್ಷ ಟೀಕೆ ಮಾಡುವುದು ಹಾಗೂ ಬಾವಿಗಿಳಿಯುವುದು ಸರ್ಕಾರದ ಗಮನ ಸೆಳೆಯುವುದು ಅವರ ಹಕ್ಕು. ವಿಧಾನಸಭೆಯಲ್ಲಿ ಅವರು ನಡೆದುಕೊಂಡ ರೀತಿಯಿಂದ ಕೆಲವರನ್ನು ಅಮಾನತು ಮಾಡಿದ್ದಾರೆ. ಅನಾಗರಿಕ ವರ್ತನೆ ಮಾಡಿದ್ದಾರೆ. ದಲಿತ ಡೆಪ್ಯುಟಿ ಸ್ಪೀಕರ್ ಮೇಲೆ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಮಾರ್ಷಲ್ ಇಲ್ಲದಿದ್ದರೆ ಏನು ಮಾಡ್ತಿದ್ರೋ ಏನೋ? ಎಂದು ಆತಂಕ ವ್ಯಕ್ತಪಡಿಸಿದರು.
ಅದಕ್ಕಾಗಿ ಅವರನ್ನು ಅಮಾನತು ಮಾಡಲಾಗಿದೆ. ಸದನದಲ್ಲಿ ಒಂದು ಶಿಸ್ತು ಇರಬೇಕಲ್ಲ. ಪರಿಷತ್ ಗೆ ಬಿಜೆಪಿಯವರು ಹಾಜರಾಗಬಹುದಿತ್ತು. ಇಲ್ಲೇನೂ ಗಲಾಟೆ ಆಗಿರಲಿಲ್ಲ ಎಂದರು.
ಜೆಡಿಎಸ್ ನವರು ಯಾಕೆ ಬಿಜೆಪಿಯವರ ಜೊತೆಗೆ ಸೇರಿಕೊಂಡರೋ ಗೊತ್ತಿಲ್ಲ. ವಿಧೇಯಕಗಳನ್ನು ಅಂಗೀಕಾರ ಆಗದಂತೆ ಮಾಡೋದಕ್ಕೂ ಜೆಡಿಎಸ್ ಬಿಜೆಪಿ ಜೊತೆಗೆ ಸೇರಿಕೊಳ್ತಾರೆ. ಮರಿತಿಬ್ಬೇಗೌಡ ಟೆಕ್ನಿಕಲಿ ಜೆಡಿಎಸ್, ಆದರೆ ಜೆಡಿಎಸ್ ವಿರೋಧಿ ಅವರು. ಕಾರಣ ಇಲ್ಲದೆಯೇ ಬಿಜೆಪಿ ಹಾಗೂ ಜೆಡಿಎಸ್ ಗೈರಾಗಿದ್ದಾರೆ. ಬೇಜವಾವ್ದಾರಿಗಳು- ಜನ ವಿರೋಧಿಗಳು ಬಿಜೆಪಿ ಜೆಡಿಎಸ್ ನವರು ಎಂದು ಕಿಡಿಕಾರಿದರು.
ಬಜೆಟ್ ಮೇಲೆ ಬೆಳಕು ಚೆಲ್ಲಿದ್ದರೆ ನನಗೆ ಅನುಕೂಲ ಆಗ್ತಾ ಇತ್ತು. ಇಬ್ಬರೇ ಇಬ್ಬರು ಬಿಜೆಪಿಯವರು ಬಜೆಟ್ ಮೇಲೆ ಮಾತನಾಡಿದ್ದಾರೆ.
ಬಜೆಟ್ ಮೇಲೆ ಚರ್ಚೆ ಮಾಡೋದಕ್ಕೆ ಗೈರು ಆಗ್ತಾರೆ. ಪ್ರಜಾಪ್ರಭುತ್ವ ಹಾಗೂ ಜನವಿರೋಧಿಗಳು ಇವರಿಬ್ಬರು ಎಂದು ವಾಗ್ದಾಳಿ ನಡೆಸಿದರು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…