BREAKING NEWS

ಬಿಜೆಪಿ ನಿಮ್ಮ ಭಾವನೆಗಳನ್ನು ಕೆರಳಿಸುತ್ತದೆ-ಕಾಂಗ್ರೆಸ್ ಬದುಕಿಗೆ ಬೇಕಾದ ಕಾರ್ಯಕ್ರಮವನ್ನು ರೂಪಿಸುತ್ತದೆ : ಸಿದ್ದರಾಮಯ್ಯ

  • ರಾಜ್ಯದ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ಹೀಯಾಳಿಸುತ್ತಿದೆ, ಅವಮಾನಿಸುತ್ತದೆ: ಸಿ.ಎಂ
  • ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ? ಸಿ.ಎಂ.ಸಿದ್ದರಾಮಯ್ಯ ಪ್ರಶ್ನೆ
  • ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಮರಳು ಮಾಡಿ ಅಧಿಕಾರ ನಡೆಸುವುದಿಲ್ಲ: ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ:ಸಿ.ಎಂ

ನೆಲಮಂಗಲ: ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮ ಜಾರಿ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆ ಗಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಇವರುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ವೃಷಭಾವತಿ ಏತ ನೀರಾವರಿ ಯೋಜನೆಯ ಶಂಕುಸ್ಥಾಪನೆ ಮತ್ತು ನೆಲಮಂಗಲ ವಿಧಾನಸಭಾ ಕ್ಷೇತ್ರದ ವಿವಿಧ ಸರ್ಕಾರಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

3 ಸಾವಿರ ಕೋಟಿ ರೂಪಾಯಿಯನ್ನು ಕೆ.ಸಿ.ವ್ಯಾಲಿ ಮತ್ತು ಎವ್.ಎನ್.ವ್ಯಾಲಿಗೆ ನಾವು ಖರ್ಚು ಮತ್ತು ಈಗ ವೃಷಭಾವತಿ ಯೋಜನೆಯನ್ನು 2240 ಕೋಟಿ ಖರ್ಚು ಮಾಡಿ ಮಾಡುತ್ತಿದ್ದೇವೆ.

ಇದರಿಂದ ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು ಜಿಲ್ಲೆಗಳ ಜನರ ನೀರಿನ ಬವಣೆ ಶಾಶ್ವತವಾಗಿ ತೀರುತ್ತದೆ. ಮೊದಲ ಹಂತದಲ್ಲಿ 70 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಇದಾಗಿದೆ.

ಇದರಿಂದ ನಾಲ್ಕೂ ಜಿಲ್ಲೆಗಳ ಅಂತರ್ಜಲ ಪ್ರಮಾಣ ವೃದ್ಧಿಯಾಗುತ್ತದೆ. ಜಮೀನುಗಳಿಗೆ ನೀರಿನ ಆಸರೆ ಹೆಚ್ಚಾಗಿ ಪರಿಣಾಮವಾಗಿ ಜನರ ಆರ್ಥಿಕ ಶಕ್ತಿಯೂ ಹೆಚ್ಚಾಗುತ್ತದೆ ಎಂದು ವಿವರಿಸಿದರು.

ಶ್ರೀನಿವಾಸ್ ಶಾಶ್ವತ ಶಾಸಕ : ಶಾಸಕ ಶ್ರೀನಿವಾಸ್ ಅವರು ಸರ್ಕಾರ ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 850 ಕೋಟಿಗೂ ಹೆಚ್ಚು ಹಣವನ್ನು ಕ್ಷೇತ್ರಕ್ಕೆ ತಂದಿದ್ದಾರೆ. ಶ್ರೀನಿವಾಸ್ ಬಹಳ ಕ್ರಿಯಾಶೀಲ ಶಾಸಕ. ಹಿಡಿದ ಕೆಲಸ ಬಿಡಲ್ಲ. ನನ್ನ ಬಳಿಗೆ ಬಂದಾಗೆಲ್ಲಾ ನೆಲಮಂಗಲದ ಅಭಿವೃದ್ಧಿ ಬಗ್ಗೆಯೇ ಚರ್ಚೆ ಮಾಡಿ ಕ್ಷೇತ್ರದ ಅಭಿವೃದ್ಧಿಗೆ ನೂರಾರು ಕೋಟಿ ಹಣ ತರುತ್ತಿದ್ದಾರೆ. ಆದ್ದರಿಂದ ಶ್ರೀನಿವಾಸ್ ಅವರನ್ನು ಶಾಶ್ವತವಾಗಿ ಕಾಂಗ್ರೆಸ್ ನಿಂದ ಗೆಲ್ಲಿಸಿ ಎಂದು ಕರೆ ನೀಡಿದರು.

ರಾಜ್ಯದ ಜನರಿಗೆ ಅನ್ನ ಕೊಡಬೇಕು. ಅದಕ್ಕಾಗಿ ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿ ಕೊಡ್ತೀವಿ. ನಮಗೆ ಅಕ್ಕಿ ಕೊಡಿ ಎಂದು ಕೇಂದ್ರಕ್ಕೆ ಕೇಳಿದೆವು. ಕೇಂದ್ರದ ಬಿಜೆಪಿ ರಾಜ್ಯದ ಜನರಿಗೆ ಅನ್ನ ಕೊಡಲು ನಿರಾಕರಿಸಿತು.

ಬಡವರ ಅನ್ನ ವಿರೋಧಿಸುವ ಬಿಜೆಪಿಗೆ ನಾಚಿಕೆ ಕೂಡ ಆಗಲಿಲ್ಲ. ಬಳಿಕ ನಾವೇ ಅಕ್ಕಿ ಬದಲಿಗೆ ಹಣವನ್ನು ಪ್ರತಿಯೊಬ್ಬರ ಖಾತೆಗೆ ಹಾಕಿದರೆ, ಈ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಬಡವರನ್ನು ಅವಮಾನಿಸುವುದು ಬಿಜೆಪಿಗೆ ಚಾಳಿ ಆಗಿಬಿಟ್ಟಿದೆ. ಇದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ , ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಸಚಿವ ಕೆ.ಹೆಚ್. ಮುನಿಯಪ್ಪ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ , ಸಣ್ಣ ನೀರಾವರಿ, ವಿಜ್ಞಾನ & ತಂತ್ರಜ್ಞಾನ ಸಚಿವರಾದ ಶ್ರೀ ಎನ್.ಎಸ್. ಬೋಸರಾಜ್ ಅವರೆ,
ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ  ಶರತ್ ಬಚ್ಚೇಗೌಡ , ಮಾಜಿ ಮುಖ್ಯಮಂತ್ರಿಗಳಾದ ಶ್ರೀ ವೀರಪ್ಪ ಮೊಯ್ಲಿ, ಮಾಜಿ ಸಚಿವರಾದ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಎನ್. ಶ್ರೀನಿವಾಸ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು

andolana

Recent Posts

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

4 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

4 hours ago

ಓದುಗರ ಪತ್ರ: ಬರ…ಅಬ್ಬರ !

ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…

4 hours ago

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…

4 hours ago

ಆರ್‌ಟಿಇ; ಮಕ್ಕಳು ಅವಕಾಶ ವಂಚಿತರಾಗಬಾರದು

ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…

4 hours ago

ಕೋವಿಡ್: ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಕಟ್ಟೆಚ್ಚರ

ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…

4 hours ago