BREAKING NEWS

‌ ಗೃಹ ಸಚಿವರ ಮನೆಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮುತ್ತಿಗೆ : ಪರಮೇಶ್ವರ್ ನಿವಾಸಕ್ಕೆ ಪೊಲೀಸ್ ಭದ್ರತೆ

ಬೆಂಗಳೂರು : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ವರದಿಯಾಗಿರುವಂತೆ ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲೇ ಸಚಿವರ ಸದಾಶಿವನಗರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪಡೆಯ ತುಕಡಿಯೊಂದನ್ನು ಅವರ ಮನೆ ಸುತ್ತ ನಿಯೋಜಿಸಲಾಗಿದೆ.

lokesh

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

6 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

6 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

6 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

6 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

6 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

9 hours ago