BREAKING NEWS

ಬಿಜೆಪಿಯ ಭೀಷ್ಮ ಎಲ್​​ಕೆ ಅಡ್ವಾಣಿಗೆ ಭಾರತ ರತ್ನ ಘೋಷಣೆ

ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಎಲ್​​ಕೆ ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡು ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.

ಪ್ರಧಾನಿ ಮೋದಿ ಟ್ವೀಟ್‌: ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಣಾರ್ಥವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು.

ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ ಎಂದು ಪ್ರಧಾನಿ ಮೋದಿ ತಮ್ಮ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಹ ಭಾರತ ರತ್ನ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಅವರ ಸಮಕಾಲೀನ ರಾಜಕೀಯ ಹಿರಿಯ ಮುತ್ಸದಿ ಅಡ್ವಾಣಿ ಅವರು ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

andolanait

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

3 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

4 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

4 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

4 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

5 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

5 hours ago