ನವದೆಹಲಿ : ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಣೆ ಮಾಡಿದ್ದಾರೆ.
ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಎಲ್ಕೆ ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡು ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು. ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ಪ್ರಧಾನಿ ಮೋದಿ ಟ್ವೀಟ್: ಶ್ರೀ ಎಲ್ ಕೆ ಅಡ್ವಾಣಿ ಜಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮಾರಣಾರ್ಥವಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು.
ಅವರು ನಮ್ಮ ಗೃಹ ಮಂತ್ರಿ ಮತ್ತು I&B ಸಚಿವರಾಗಿಯೂ ಗುರುತಿಸಿಕೊಂಡರು. ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ ಎಂದು ಪ್ರಧಾನಿ ಮೋದಿ ತಮ್ಮ ಖಾತೆಯಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸಹ ಭಾರತ ರತ್ನ ಗೌರವಕ್ಕೆ ಪಾತ್ರರಾಗಿದ್ದರು. ಇದೀಗ ಅವರ ಸಮಕಾಲೀನ ರಾಜಕೀಯ ಹಿರಿಯ ಮುತ್ಸದಿ ಅಡ್ವಾಣಿ ಅವರು ಭಾರತ ರತ್ನ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…
ಮುಖ್ಯಮಂತ್ರಿಗಳಾದ ಕೆಲವೇ ದಿನಗಳಲ್ಲಿ ಡಿ.ಕೆ.ಶಿವಕುಮಾರ್ ಅವರು ಸರ್ಕಾರಿ ಅಧಿಕಾರಿಗಳು, ನೌಕರರು ಹಾಗೂ ಸಿಬ್ಬಂದಿಗಳು ಬೆಳಿಗ್ಗೆ ೧೦ ಗಂಟೆಗೆ ಹಾಜರಾತಿ ದಾಖಲಿಸುವಂತೆ…