BREAKING NEWS

ಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ: ಪೋಸ್ಟರ್‌ ಹಂಚಿಕೊಂಡ ಕಾಂಗ್ರೆಸ್‌

ಬೆಂಗಳೂರು : ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಲ್ಲಿನ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹಾಗು ಬಿಜೆಪಿ ಪಾಲಿಗೆ ದೊಡ್ಡ ಮುಜುಗರವಾಗಿ ಮಾರ್ಪಟ್ಟಿದೆ. ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಿಸಿದ ಪರಶುರಾಮನ ಪ್ರತಿಮೆಯೇ ನಾಪತ್ತೆಯಾಗಿದ್ದು, ಇದೀಗ ಕಾರ್ಕಳದ ಬಿಜೆಪಿ ಶಾಸಕ ಸುನಿಲ್‌ ಕುಮಾರ್ ಕೂಡ ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಸಂಬಂಧ ಬಿಜೆಪಿ ಶಾಸಕ ಸುನಿಲ್‌ ಕುಮಾರ್ ಅವರ ಭಾವಚಿತ್ರವುಳ್ಳ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಕಾಂಗ್ರೆಸ್‌, ʼʼಫೈಬರ್ ಮೂರ್ತಿಯನ್ನು ಕಂಚು ಎಂದು ಇಡೀ ಕರ್ನಾಟಕದ ಜನರ ಕಿವಿ ಮೇಲೆ ಫ್ಲವರ್ ಇಟ್ಟುರುವ ಬಿಜೆಪಿ ತಾನು ಲೂಟಿ ಹೊಡೆಯಲು ಯಾವ ಕೆಳ ಮಟ್ಟಕ್ಕೆ ಬೇಕಿದ್ದರೂ ಇಳಿಯಬಲ್ಲದು ಎಂದು ತೋರಿಸಿಕೊಟ್ಟಿದೆʼʼ ಎಂದು ಕಿಡಿಕಾರಿದೆ.

ʼʼಮೂರ್ತಿಯಲ್ಲಿ ಕಂಚನ್ನು ಹಾಗೂ ಶಾಸಕರನ್ನು ಹುಡುಕಿದವರಿಗೆ ಸೂಕ್ತ ಬಹುಮಾನವಿದೆʼʼ ಎಂದು ಪೋಸ್ಟರ್‌ ನಲ್ಲಿ ಉಲ್ಲೇಖಿಸಲಾಗಿದೆ.

ʼʼಫೈಬರ್ ಪ್ರತಿಮೆ ತೋರಿಸಿ ಕಂಚು ಎಂದರೆ ಒಪ್ಪಲಾಗದುʼʼ

ʼʼಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ, ಧರ್ಮ ದ್ರೋಹಿ ಬಿಜೆಪಿ ಸರಕಾರ 14 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಪರಶುರಾಮನ ಮೂರ್ತಿ ಕಾಣೆಯಾಗಿದೆ! “ಕಂಚಿನ“ ಪ್ರತಿಮೆ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಆದರೆ, ವಿಶೇಷ ಸೂಚನೆ ಏನೆಂದರೆ ʼʼಫೈಬರ್ ಪ್ರತಿಮೆ ತೋರಿಸಿ ಕಂಚು ಎಂದರೆ ಒಪ್ಪಲಾಗದುʼʼ ಎಂದು ಕಾಂಗ್ರೆಸ್‌ ಕಾಲೆಳೆದಿದೆ.

https://x.com/INCKarnataka/status/1715663516282007663?s=20

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

20 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

20 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

20 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

20 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

20 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

20 hours ago