ಬೆಂಗಳೂರು : ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಲ್ಲಿನ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹಾಗು ಬಿಜೆಪಿ ಪಾಲಿಗೆ ದೊಡ್ಡ ಮುಜುಗರವಾಗಿ ಮಾರ್ಪಟ್ಟಿದೆ. ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಿಸಿದ ಪರಶುರಾಮನ ಪ್ರತಿಮೆಯೇ ನಾಪತ್ತೆಯಾಗಿದ್ದು, ಇದೀಗ ಕಾರ್ಕಳದ ಬಿಜೆಪಿ ಶಾಸಕ ಸುನಿಲ್ ಕುಮಾರ್ ಕೂಡ ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.
ಈ ಸಂಬಂಧ ಬಿಜೆಪಿ ಶಾಸಕ ಸುನಿಲ್ ಕುಮಾರ್ ಅವರ ಭಾವಚಿತ್ರವುಳ್ಳ ಪೋಸ್ಟರ್ ಅನ್ನು ಹಂಚಿಕೊಂಡಿರುವ ಕಾಂಗ್ರೆಸ್, ʼʼಫೈಬರ್ ಮೂರ್ತಿಯನ್ನು ಕಂಚು ಎಂದು ಇಡೀ ಕರ್ನಾಟಕದ ಜನರ ಕಿವಿ ಮೇಲೆ ಫ್ಲವರ್ ಇಟ್ಟುರುವ ಬಿಜೆಪಿ ತಾನು ಲೂಟಿ ಹೊಡೆಯಲು ಯಾವ ಕೆಳ ಮಟ್ಟಕ್ಕೆ ಬೇಕಿದ್ದರೂ ಇಳಿಯಬಲ್ಲದು ಎಂದು ತೋರಿಸಿಕೊಟ್ಟಿದೆʼʼ ಎಂದು ಕಿಡಿಕಾರಿದೆ.
ʼʼಮೂರ್ತಿಯಲ್ಲಿ ಕಂಚನ್ನು ಹಾಗೂ ಶಾಸಕರನ್ನು ಹುಡುಕಿದವರಿಗೆ ಸೂಕ್ತ ಬಹುಮಾನವಿದೆʼʼ ಎಂದು ಪೋಸ್ಟರ್ ನಲ್ಲಿ ಉಲ್ಲೇಖಿಸಲಾಗಿದೆ.
ʼʼಫೈಬರ್ ಪ್ರತಿಮೆ ತೋರಿಸಿ ಕಂಚು ಎಂದರೆ ಒಪ್ಪಲಾಗದುʼʼ
ʼʼಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ, ಧರ್ಮ ದ್ರೋಹಿ ಬಿಜೆಪಿ ಸರಕಾರ 14 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಪರಶುರಾಮನ ಮೂರ್ತಿ ಕಾಣೆಯಾಗಿದೆ! “ಕಂಚಿನ“ ಪ್ರತಿಮೆ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಆದರೆ, ವಿಶೇಷ ಸೂಚನೆ ಏನೆಂದರೆ ʼʼಫೈಬರ್ ಪ್ರತಿಮೆ ತೋರಿಸಿ ಕಂಚು ಎಂದರೆ ಒಪ್ಪಲಾಗದುʼʼ ಎಂದು ಕಾಂಗ್ರೆಸ್ ಕಾಲೆಳೆದಿದೆ.
ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…
ಮೈಸೂರು : ಸೋಮವಾರ ಪಬ್ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…