BREAKING NEWS

ಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ: ಪೋಸ್ಟರ್‌ ಹಂಚಿಕೊಂಡ ಕಾಂಗ್ರೆಸ್‌

ಬೆಂಗಳೂರು : ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ಅಲ್ಲಿನ ಶಾಸಕ, ಮಾಜಿ ಸಚಿವ ಸುನಿಲ್ ಕುಮಾರ್ ಹಾಗು ಬಿಜೆಪಿ ಪಾಲಿಗೆ ದೊಡ್ಡ ಮುಜುಗರವಾಗಿ ಮಾರ್ಪಟ್ಟಿದೆ. ಕೋಟಿಗಟ್ಟಲೆ ಖರ್ಚು ಮಾಡಿ ನಿರ್ಮಿಸಿದ ಪರಶುರಾಮನ ಪ್ರತಿಮೆಯೇ ನಾಪತ್ತೆಯಾಗಿದ್ದು, ಇದೀಗ ಕಾರ್ಕಳದ ಬಿಜೆಪಿ ಶಾಸಕ ಸುನಿಲ್‌ ಕುಮಾರ್ ಕೂಡ ಕಾಣೆಯಾಗಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಈ ಸಂಬಂಧ ಬಿಜೆಪಿ ಶಾಸಕ ಸುನಿಲ್‌ ಕುಮಾರ್ ಅವರ ಭಾವಚಿತ್ರವುಳ್ಳ ಪೋಸ್ಟರ್‌ ಅನ್ನು ಹಂಚಿಕೊಂಡಿರುವ ಕಾಂಗ್ರೆಸ್‌, ʼʼಫೈಬರ್ ಮೂರ್ತಿಯನ್ನು ಕಂಚು ಎಂದು ಇಡೀ ಕರ್ನಾಟಕದ ಜನರ ಕಿವಿ ಮೇಲೆ ಫ್ಲವರ್ ಇಟ್ಟುರುವ ಬಿಜೆಪಿ ತಾನು ಲೂಟಿ ಹೊಡೆಯಲು ಯಾವ ಕೆಳ ಮಟ್ಟಕ್ಕೆ ಬೇಕಿದ್ದರೂ ಇಳಿಯಬಲ್ಲದು ಎಂದು ತೋರಿಸಿಕೊಟ್ಟಿದೆʼʼ ಎಂದು ಕಿಡಿಕಾರಿದೆ.

ʼʼಮೂರ್ತಿಯಲ್ಲಿ ಕಂಚನ್ನು ಹಾಗೂ ಶಾಸಕರನ್ನು ಹುಡುಕಿದವರಿಗೆ ಸೂಕ್ತ ಬಹುಮಾನವಿದೆʼʼ ಎಂದು ಪೋಸ್ಟರ್‌ ನಲ್ಲಿ ಉಲ್ಲೇಖಿಸಲಾಗಿದೆ.

ʼʼಫೈಬರ್ ಪ್ರತಿಮೆ ತೋರಿಸಿ ಕಂಚು ಎಂದರೆ ಒಪ್ಪಲಾಗದುʼʼ

ʼʼಬಿಜೆಪಿಯ ಭ್ರಷ್ಟಾಚಾರ ಪರಶುರಾಮನನ್ನೂ ಬಿಡಲಿಲ್ಲ, ಧರ್ಮ ದ್ರೋಹಿ ಬಿಜೆಪಿ ಸರಕಾರ 14 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ಪರಶುರಾಮನ ಮೂರ್ತಿ ಕಾಣೆಯಾಗಿದೆ! “ಕಂಚಿನ“ ಪ್ರತಿಮೆ ಹುಡುಕಿಕೊಟ್ಟವರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಆದರೆ, ವಿಶೇಷ ಸೂಚನೆ ಏನೆಂದರೆ ʼʼಫೈಬರ್ ಪ್ರತಿಮೆ ತೋರಿಸಿ ಕಂಚು ಎಂದರೆ ಒಪ್ಪಲಾಗದುʼʼ ಎಂದು ಕಾಂಗ್ರೆಸ್‌ ಕಾಲೆಳೆದಿದೆ.

https://x.com/INCKarnataka/status/1715663516282007663?s=20

andolanait

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

3 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

7 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

7 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

8 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

8 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

9 hours ago