BREAKING NEWS

ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ‌ಸೃಷ್ಠಿಸಿದ್ದಾರೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು.

ಇದಲ್ಲದೇ ನಿಗಮ ಮಂಡಳಿ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದರ ಜತೆಗೆ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಇದೀಗ ಭಾನುವಾರ ಹೊಸ ಬೆಳವಣಿಗೆಯಲ್ಲಿ ತವನಪ್ಪ ಅಷ್ಟಗಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಒಂದು ಬಾರಿ ತವನಪ್ಪ ಅಷ್ಟಗಿ ಮತ್ತು ಅವರ ಪತ್ನಿ ಕಸ್ತೂರಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಕ್ಷೇತ್ರದಲ್ಲಿ ತಮ್ಮದೇ ಆದ ಬೆಂಬಲಿಗರ ಪಡೆಯನ್ನು ಹೊಂದಿರುವ ಅಷ್ಟಗಿಯವರು ಇದೀಗ ಕಾಂಗ್ರೆಸ್ ಕೈ ಹಿಡಿದಿದದ್ದು ಗ್ರಾಮೀಣದಲ್ಲಿ ಇದರಿಂದ ಬಿಜೆಪಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ಜಾರಕಿಹೊಳಿ ರಂಗ ಪ್ರವೇಶ : ಇಲ್ಲಿಯ ಸವದತ್ತಿ ರಸ್ತೆಯಲ್ಲಿರುವ ತವನಪ್ಪ ಅಷ್ಟಗಿ ಅವರ ನಿವಾಸಕ್ಕೆ ಭಾನುವಾರ ಬೆಳಿಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ವಿನಯ ಕುಲಕರ್ಣಿ ಸಹೋದರ, ಕಾಂಗ್ರೆಸ್ ಮುಖಂಡ ವಿಜಯ ಕುಲಕರ್ಣಿ ಅವರು ಬೇಟಿ ನೀಡಿದರು. ಈ ವೇಳೆ ಮಾತುಕತೆ ನಡೆಸಿ, ಅಷ್ಟಗಿ ಅವರ ಮನವೊಲಿಸುವ ಕೆಲಸ ಮಾಡಿದರು. ಇದಾದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ ಜಾರಕಿಹೊಳಿ, ವರಿಷ್ಠರ ಸೂಚನೆ ಮೇರೆಗೆ ನಾನು ತವನಪ್ಪ ಅವರ ಮನೆಗೆ ಬಂದಿದ್ದೆ. ಇನ್ನು ಮುಂದೆ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಇದು ಒಳ್ಳೆಯ ಬೆಳವಣಿಗೆ. ಮೊದಲು ನಾವೇ ಅಷ್ಟಗಿ ಅವರನ್ನು ಸಂಪರ್ಕ ಮಾಡಿದ್ದೆವು. ಈಗ ನಾವು ಬಂದು ವಿನಂತಿ ಮಾಡಿದ್ದಕ್ಕೆ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅಷ್ಟಗಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಪರಿಣಾಮ ಕ್ಷೇತ್ರದ ಜತೆಗೆ ಬೇರೆ ಕಡೆಯೂ ಆಗಲಿದೆ. ತವನಪ್ಪ ಸಣ್ಣ ಸಮಾಜದವರಾದರೂ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿದ ತವನಪ್ಪ ಅಷ್ಟಗಿ, ಬಿಜೆಪಿಯಲ್ಲಿ ನಮಗೆ ಸಾಮಾಜಿಕ ನ್ಯಾಯ ಸಿಗಲಿಲ್ಲ. ನಮ್ಮ ಗೌರವಕ್ಕೆ ಧಕ್ಕೆ ಬರುವ ಕೆಲಸವನ್ನು ಹಾಲಿ ಶಾಸಕ ಅಮೃತ ದೇಸಾಯಿ ಮಾಡಿದರು. ಆರು ಬಾರಿ ಸೋತವರನ್ನು ನಾವು ಶಾಸಕರನ್ನಾಗಿ ಮಾಡಿದೇವು. ತನು, ಮನ, ಧನದಿಂದ ಕಾರ್ಯಕರ್ತರೆಲ್ಲ ಸೇರಿ ಅವರನ್ನು ಆಯ್ಕೆ ಮಾಡಿದ್ದೆವು. ಆದರೆ, ಅಮೃತ ದೇಸಾಯಿ ಕಾರ್ಯಕರ್ತರನ್ನೂ ಕಡೆಗಣಿಸಿದರು ಎಂದು ದೂರಿದರು.

ಬಿಜೆಪಿಯಲ್ಲಿ ಒಂದು ವಿಶ್ವಾಸ ಮೇಲೆ ಇದ್ದೆ. ಆದರೆ, ಅಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ. ಇದೀಗ ಸತೀಶ ಜಾರಕಿಹೊಳಿ ಅವರು ನಮ್ಮ ಮನೆಗೆ ಬಂದು ಮನವೊಲಿಸಿ, ನಮಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರಿಂದ ನಾನು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಸೋಮವಾರ ನಾಮಪತ್ರ ವಾಪಸ್ ಪಡೆಯುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ ನ್ಯಾಯದ ವಿಶ್ವಾಸದಿಂದ ಕಾಂಗ್ರೆಸ್ ಸೇರಿದ್ದೇನೆ. ಯಾವುದೇ ಷರತ್ತು ವಿಽಸಿಲ್ಲ. ಗೌರವ ಬಯಸಿ, ಬಂದಿದ್ದೇನೆ. ಮೊದಲು ನಾನು ಕಾಂಗ್ರೆಸ್‌ನಲ್ಲೇ ಇದ್ದೆ. ಆ ಬಳಿಕ ಕೆಜೆಪಿ, ಬಿಜೆಪಿ ಸೇರ್ಪಡೆಗೊಂಡಿದ್ದೆ. ಈಗ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ.
-ತವನಪ್ಪ ಅಷ್ಟಗಿ

ಬಿಜೆಪಿ ಪಕ್ಷವನ್ನು ತೊರೆದು ತವನಪ್ಪ ಅಷ್ಟಗಿ ಅಽಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಅವರ ಶಕ್ತಿಗನುಗುಣವಾಗಿ ಅವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಅವರು ಸೋಮವಾರ ಅದನ್ನು ವಾಪಸ್ ಪಡೆದು ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಲ್ಲುತ್ತಾರೆ.
-ಸತೀಶ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ

ಅಷ್ಟಗಿಗೆ ಬೆಲ್ಲದ ಟಾಂಗ್
ತವನಪ್ಪ ಅಷ್ಟಗಿ ಮೂಲತ: ವ್ಯಾಪಾರಿಯಾಗಿದ್ದು, ಲಾಭದ ಆಸೆಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಆದರೆ ಅವರು ಅಲ್ಲಿ ನಷ್ಟವನ್ನೇ ಅನುಭವಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷ, ಅದರ ನಾಯಕ ಅವರೊಂದಿಗೆ ಹಾಗೂ ಅವರ ಪತ್ನಿ ಜತೆಗೆ ಯಾವ ರೀತಿ ನಡೆದುಕೊಂಡಿತ್ತು ಎಂಬುದನ್ನು ಮರೆತಿದ್ದಾರೆ ಅಷ್ಟಗಿ. ಸ್ವಾಭಿಮಾನಿಯಾಗಿದ್ದರೆ ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿರಲಿಲ್ಲ. ಅವರಿಗೆ ತತ್ವ, ಸಿದ್ದಾಂತವಿಲ್ಲ.
-ಅರವಿಂದ ಬೆಲ್ಲದ, ಶಾಸಕ

andolanait

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

8 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

8 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

8 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

9 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

9 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

10 hours ago