BREAKING NEWS

ಬಿಜೆಪಿ ಬಂಡಾಯ ಅಭ್ಯರ್ಥಿ ತವಣಪ್ಪ ಅಷ್ಟಗಿ ಕಾಂಗ್ರೆಸ್ ಸೇರ್ಪಡೆ

ಧಾರವಾಡ: ಬಿಜೆಪಿ ಪಕ್ಷದ ಪ್ರಾಥಮಿಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ಬಂಡಾಯವೆದ್ದು ಧಾರವಾಡ ಗ್ರಾಮೀಣ-71 ರ ವಿಧಾನಸಭಾ ಮತಕ್ಷೇತ್ರಕ್ಕೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದ ತವನಪ್ಪ ಅಷ್ಟಗಿ ಇದೀಗ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಮೂಲಕ ಕ್ಷೇತ್ರದಲ್ಲಿ ಹೊಸ ಸಂಚಲನ ‌ಸೃಷ್ಠಿಸಿದ್ದಾರೆ.

ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ತವನಪ್ಪ ಅಷ್ಟಗಿ ಬಿಜೆಪಿ ವರಿಷ್ಠರು ಮಣೆ ಹಾಕದೇ ಹಾಲಿ ಶಾಸಕ ಅಮೃತ ದೇಸಾಯಿ ಅವರಿಗೆ ಈ ಸಲವೂ ಟಿಕೆಟ್ ನೀಡಿದ್ದರಿಂದ ಅಷ್ಟಗಿ ಮುನಿಸಿಕೊಂಡಿದ್ದರು.

ಇದಲ್ಲದೇ ನಿಗಮ ಮಂಡಳಿ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇದರ ಜತೆಗೆ ಬಂಡಾಯವೆದ್ದು ಪಕ್ಷೇತರರಾಗಿ ಕಣಕ್ಕೆ ಇಳಿದಿದ್ದರು. ಇದೀಗ ಭಾನುವಾರ ಹೊಸ ಬೆಳವಣಿಗೆಯಲ್ಲಿ ತವನಪ್ಪ ಅಷ್ಟಗಿ ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದ ಅವರು ಒಂದು ಬಾರಿ ತವನಪ್ಪ ಅಷ್ಟಗಿ ಮತ್ತು ಅವರ ಪತ್ನಿ ಕಸ್ತೂರಿ ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಕ್ಷೇತ್ರದಲ್ಲಿ ತಮ್ಮದೇ ಆದ ಬೆಂಬಲಿಗರ ಪಡೆಯನ್ನು ಹೊಂದಿರುವ ಅಷ್ಟಗಿಯವರು ಇದೀಗ ಕಾಂಗ್ರೆಸ್ ಕೈ ಹಿಡಿದಿದದ್ದು ಗ್ರಾಮೀಣದಲ್ಲಿ ಇದರಿಂದ ಬಿಜೆಪಿಗೆ ತೀವ್ರ ಹಿನ್ನಡೆಯಾದಂತಾಗಿದೆ.

ಜಾರಕಿಹೊಳಿ ರಂಗ ಪ್ರವೇಶ : ಇಲ್ಲಿಯ ಸವದತ್ತಿ ರಸ್ತೆಯಲ್ಲಿರುವ ತವನಪ್ಪ ಅಷ್ಟಗಿ ಅವರ ನಿವಾಸಕ್ಕೆ ಭಾನುವಾರ ಬೆಳಿಗ್ಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹಾಗೂ ವಿನಯ ಕುಲಕರ್ಣಿ ಸಹೋದರ, ಕಾಂಗ್ರೆಸ್ ಮುಖಂಡ ವಿಜಯ ಕುಲಕರ್ಣಿ ಅವರು ಬೇಟಿ ನೀಡಿದರು. ಈ ವೇಳೆ ಮಾತುಕತೆ ನಡೆಸಿ, ಅಷ್ಟಗಿ ಅವರ ಮನವೊಲಿಸುವ ಕೆಲಸ ಮಾಡಿದರು. ಇದಾದ ಬಳಿಕ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ ಜಾರಕಿಹೊಳಿ, ವರಿಷ್ಠರ ಸೂಚನೆ ಮೇರೆಗೆ ನಾನು ತವನಪ್ಪ ಅವರ ಮನೆಗೆ ಬಂದಿದ್ದೆ. ಇನ್ನು ಮುಂದೆ ಅವರು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಇದು ಒಳ್ಳೆಯ ಬೆಳವಣಿಗೆ. ಮೊದಲು ನಾವೇ ಅಷ್ಟಗಿ ಅವರನ್ನು ಸಂಪರ್ಕ ಮಾಡಿದ್ದೆವು. ಈಗ ನಾವು ಬಂದು ವಿನಂತಿ ಮಾಡಿದ್ದಕ್ಕೆ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ. ಅಷ್ಟಗಿ ಅವರು ಕಾಂಗ್ರೆಸ್ ಸೇರ್ಪಡೆಗೊಂಡಿರುವ ಪರಿಣಾಮ ಕ್ಷೇತ್ರದ ಜತೆಗೆ ಬೇರೆ ಕಡೆಯೂ ಆಗಲಿದೆ. ತವನಪ್ಪ ಸಣ್ಣ ಸಮಾಜದವರಾದರೂ ದೊಡ್ಡ ನಾಯಕರಾಗಿ ಬೆಳೆಯುತ್ತಾರೆ ಎಂದರು.

ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ಬಳಿಕ ಮಾತನಾಡಿದ ತವನಪ್ಪ ಅಷ್ಟಗಿ, ಬಿಜೆಪಿಯಲ್ಲಿ ನಮಗೆ ಸಾಮಾಜಿಕ ನ್ಯಾಯ ಸಿಗಲಿಲ್ಲ. ನಮ್ಮ ಗೌರವಕ್ಕೆ ಧಕ್ಕೆ ಬರುವ ಕೆಲಸವನ್ನು ಹಾಲಿ ಶಾಸಕ ಅಮೃತ ದೇಸಾಯಿ ಮಾಡಿದರು. ಆರು ಬಾರಿ ಸೋತವರನ್ನು ನಾವು ಶಾಸಕರನ್ನಾಗಿ ಮಾಡಿದೇವು. ತನು, ಮನ, ಧನದಿಂದ ಕಾರ್ಯಕರ್ತರೆಲ್ಲ ಸೇರಿ ಅವರನ್ನು ಆಯ್ಕೆ ಮಾಡಿದ್ದೆವು. ಆದರೆ, ಅಮೃತ ದೇಸಾಯಿ ಕಾರ್ಯಕರ್ತರನ್ನೂ ಕಡೆಗಣಿಸಿದರು ಎಂದು ದೂರಿದರು.

ಬಿಜೆಪಿಯಲ್ಲಿ ಒಂದು ವಿಶ್ವಾಸ ಮೇಲೆ ಇದ್ದೆ. ಆದರೆ, ಅಲ್ಲಿ ಸಿಗಬೇಕಾದ ಗೌರವ ಸಿಗಲಿಲ್ಲ. ಇದೀಗ ಸತೀಶ ಜಾರಕಿಹೊಳಿ ಅವರು ನಮ್ಮ ಮನೆಗೆ ಬಂದು ಮನವೊಲಿಸಿ, ನಮಗೆ ಧೈರ್ಯ ತುಂಬುವ ಕೆಲಸ ಮಾಡಿದ್ದರಿಂದ ನಾನು ಕಾಂಗ್ರೆಸ್ ಸೇರ್ಪಡೆಗೊಂಡಿದ್ದೇನೆ. ಸೋಮವಾರ ನಾಮಪತ್ರ ವಾಪಸ್ ಪಡೆಯುತ್ತೇನೆ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ ನ್ಯಾಯದ ವಿಶ್ವಾಸದಿಂದ ಕಾಂಗ್ರೆಸ್ ಸೇರಿದ್ದೇನೆ. ಯಾವುದೇ ಷರತ್ತು ವಿಽಸಿಲ್ಲ. ಗೌರವ ಬಯಸಿ, ಬಂದಿದ್ದೇನೆ. ಮೊದಲು ನಾನು ಕಾಂಗ್ರೆಸ್‌ನಲ್ಲೇ ಇದ್ದೆ. ಆ ಬಳಿಕ ಕೆಜೆಪಿ, ಬಿಜೆಪಿ ಸೇರ್ಪಡೆಗೊಂಡಿದ್ದೆ. ಈಗ ಮರಳಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದೇನೆ.
-ತವನಪ್ಪ ಅಷ್ಟಗಿ

ಬಿಜೆಪಿ ಪಕ್ಷವನ್ನು ತೊರೆದು ತವನಪ್ಪ ಅಷ್ಟಗಿ ಅಽಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದು, ಅವರ ಶಕ್ತಿಗನುಗುಣವಾಗಿ ಅವರಿಗೆ ನಮ್ಮ ಪಕ್ಷದಲ್ಲಿ ಸ್ಥಾನಮಾನ ನೀಡಲಾಗುವುದು. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವ ಅವರು ಸೋಮವಾರ ಅದನ್ನು ವಾಪಸ್ ಪಡೆದು ವಿನಯ್ ಕುಲಕರ್ಣಿ ಬೆಂಬಲಕ್ಕೆ ನಿಲ್ಲುತ್ತಾರೆ.
-ಸತೀಶ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ

ಅಷ್ಟಗಿಗೆ ಬೆಲ್ಲದ ಟಾಂಗ್
ತವನಪ್ಪ ಅಷ್ಟಗಿ ಮೂಲತ: ವ್ಯಾಪಾರಿಯಾಗಿದ್ದು, ಲಾಭದ ಆಸೆಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಆದರೆ ಅವರು ಅಲ್ಲಿ ನಷ್ಟವನ್ನೇ ಅನುಭವಿಸಲಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷ, ಅದರ ನಾಯಕ ಅವರೊಂದಿಗೆ ಹಾಗೂ ಅವರ ಪತ್ನಿ ಜತೆಗೆ ಯಾವ ರೀತಿ ನಡೆದುಕೊಂಡಿತ್ತು ಎಂಬುದನ್ನು ಮರೆತಿದ್ದಾರೆ ಅಷ್ಟಗಿ. ಸ್ವಾಭಿಮಾನಿಯಾಗಿದ್ದರೆ ಎಂದಿಗೂ ಕಾಂಗ್ರೆಸ್ ಪಕ್ಷಕ್ಕೆ ಹೋಗುತ್ತಿರಲಿಲ್ಲ. ಅವರಿಗೆ ತತ್ವ, ಸಿದ್ದಾಂತವಿಲ್ಲ.
-ಅರವಿಂದ ಬೆಲ್ಲದ, ಶಾಸಕ

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

10 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

11 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago