ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆಗಳು ನಡೆದಿವೆ. ಜಂಬೂಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ಜಮಾವಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ವೃತ್ತ ಸೇರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಭದ್ರತೆ ಪರಿಶೀಲನೆ ಮಾಡಲಾಗಿದೆ.
ಮೈಸೂರು ಬೆಂಗಳೂರು ಉಗ್ರರ ಹಿಟ್ ಲಿಸ್ಟ್ ನಲ್ಲಿರುವ ವಿಚಾರ ಸಂಬಂಧ ಕೇಂದ್ರ ಗೃಹ ಇಲಾಖೆ ರಾಜ್ಯಕ್ಕೆ ಸೂಚನೆ ಕೊಟ್ಟ ಬೆನ್ನಲೆ ಖಾಕಿ ಹೈ ಅಲರ್ಟ್ ಆಗಿದೆ. ದಸರಾ ಮೇಲೆ ಉಗ್ರರ ಕರಿ ನೆರಳು ಬೀಳದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳದಿಂದ ತಪಾಸಣಾ ಕಾರ್ಯ ನಡೆದಿದೆ. ಅರಮನೆಯ ಇಂಚಿಂಚೂ ಬಿಡದಂತೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಟ್ಯಾಬ್ಲೊಗಳನ್ನು ಶ್ವಾನದಳ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.
ಜನರು ರಸ್ತೆಗೆ ಇಳಿಯದಂತೆ ತಡೆ ಬೇಲಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅರಮನೆ ಎದುರು ವಿಶಾಲವಾದ ಶಾಮಿಯಾನ ಕುರ್ಚಿಗಳನ್ನು ಹಾಕಲಾಗಿದ್ದು, ಜಂಬೂಸವಾರಿ ವೀಕ್ಷಿಸಲು 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಮೆರವಣಿಗೆ ಸಾಗಲಿದ್ದು, ಜಂಬೂಸವಾರಿ ಭದ್ರತೆಗೆ 6 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಮೈಸೂರಿಗೆ ಆಗಮಿಸಿರುವ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.
ಇನ್ನು 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನೆರವೇರಲಿದೆ.
ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಈಗ ಬ್ರೇಕ್ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಅರಣ್ಯಾಧಿಕಾರಿಗಳು…
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…
ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…
ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…