BREAKING NEWS

ದಸರಾ ಮೇಲೆ ಉಗ್ರರ ಕರಿ ನೆರಳು : ಮೈಸೂರಿನಲ್ಲಿ ಖಾಕಿ ಹೈ ಅಲರ್ಟ್

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಶುರುವಾಗಿದೆ. ಮೈಸೂರಿನ ಅರಮನೆ ಆವರಣದಲ್ಲಿ ಜಂಬೂ ಸವಾರಿಗೆ ಸಕಲ ಸಿದ್ಧತೆಗಳು ನಡೆದಿವೆ. ಜಂಬೂಸವಾರಿ ವೀಕ್ಷಿಸಲು ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ ಮೈಸೂರಿಗೆ ಆಗಮಿಸಿದ್ದಾರೆ. ಜಂಬೂಸವಾರಿ ಮೆರವಣಿಗೆ ಸಾಗುವ ರಸ್ತೆ ಇಕ್ಕೆಲಗಳಲ್ಲಿ ಲಕ್ಷಾಂತರ ಮಂದಿ ಜಮಾವಣೆಗೊಳ್ಳಲಿರುವ ಹಿನ್ನೆಲೆಯಲ್ಲಿ ಚಾಮರಾಜೇಂದ್ರ ವೃತ್ತ ಸೇರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಭದ್ರತೆ ಪರಿಶೀಲನೆ ಮಾಡಲಾಗಿದೆ.

ಮೈಸೂರು ಬೆಂಗಳೂರು ಉಗ್ರರ ಹಿಟ್ ಲಿಸ್ಟ್ ನಲ್ಲಿರುವ ವಿಚಾರ ಸಂಬಂಧ ಕೇಂದ್ರ ಗೃಹ ಇಲಾಖೆ ರಾಜ್ಯಕ್ಕೆ ಸೂಚನೆ ಕೊಟ್ಟ ಬೆನ್ನಲೆ ಖಾಕಿ ಹೈ ಅಲರ್ಟ್ ಆಗಿದೆ. ದಸರಾ ಮೇಲೆ ಉಗ್ರರ ಕರಿ ನೆರಳು ಬೀಳದಂತೆ ಕಟ್ಟೆಚ್ಚರ ವಹಿಸಲಾಗಿದೆ. ಬಾಂಬ್ ಸ್ಕ್ವಾಡ್ ಹಾಗೂ ಶ್ವಾನದಳದಿಂದ ತಪಾಸಣಾ ಕಾರ್ಯ ನಡೆದಿದೆ. ಅರಮನೆಯ ಇಂಚಿಂಚೂ ಬಿಡದಂತೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಟ್ಯಾಬ್ಲೊಗಳನ್ನು ಶ್ವಾನದಳ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.

ಜನರು ರಸ್ತೆಗೆ ಇಳಿಯದಂತೆ ತಡೆ ಬೇಲಿ ನಿರ್ಮಾಣ ಮಾಡಲಾಗಿದೆ. ಈಗಾಗಲೇ ಅರಮನೆ ಎದುರು ವಿಶಾಲವಾದ ಶಾಮಿಯಾನ ಕುರ್ಚಿಗಳನ್ನು ಹಾಕಲಾಗಿದ್ದು, ಜಂಬೂಸವಾರಿ ವೀಕ್ಷಿಸಲು 25 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಜಂಬೂಸವಾರಿ ಮೆರವಣಿಗೆ ಹಿನ್ನೆಲೆ ಪೊಲೀಸ್‌ ಬಿಗಿ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ದಸರಾ ಮೆರವಣಿಗೆ ಸಾಗಲಿದ್ದು, ಜಂಬೂಸವಾರಿ ಭದ್ರತೆಗೆ 6 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಮೈಸೂರಿಗೆ ಆಗಮಿಸಿರುವ ರಾಜ್ಯದ ವಿವಿಧ ಜಿಲ್ಲೆಗಳ ಪೊಲೀಸರು ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ.

ಇನ್ನು 11 ಐಪಿಎಸ್ ಅಧಿಕಾರಿಗಳು ಸೇರಿ 4,000 ಪೊಲೀಸರ ನಿಯೋಜನೆ ಮಾಡಲಾಗಿದೆ. ಪ್ರತಿಯೊಬ್ಬರನ್ನೂ ತಪಾಸಣೆ ಮಾಡಿ ಅರಮನೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ 1.46ರಿಂದ 2.08ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ನಂದಿ ಪೂಜೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ‌ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಸಂಜೆ 4.40ರಿಂದ 5 ಗಂಟೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಜಂಬೂ ಸವಾರಿಗೆ ಪುಷ್ಪಾರ್ಚನೆ ನೆರವೇರಲಿದೆ.

lokesh

Recent Posts

1984 ಸಿಖ್‌ ವಿರೋಧಿ ದಂಗೆ ಪ್ರಕರಣ; ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್‌ ಕುಮಾರ್‌ ನಿಧನ

ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…

29 mins ago

ನಾರಾಯಣಸ್ವಾಮಿಗೆ ಕಮಾಂಡೆಂಟ್‌ ಬೆಳ್ಳಿ ಪದಕ

ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…

43 mins ago

ಹನೂರು ಎನ್‌ಕೌಂಟರ್‌ ಬೆನ್ನಲ್ಲೇ ಕಳ್ಳಬೇಟೆ ಕಡಿವಾಣಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್‌ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…

4 hours ago

ಟೋಲ್ ಬಳಿ ಸೈನ್ ಬೋರ್ಡ್‌ಗೆ ಖಾಸಗಿ ಬಸ್ ಡಿಕ್ಕಿ; ಇಬ್ಬರು ದುರ್ಮರಣ, 20ಕ್ಕೂ ಹೆಚ್ಚು ಜನರಿಗೆ ಗಾಯ

ಮಂಡ್ಯ: ಟೋಲ್‌ ಬಳಿಯ ಸೈನ್ ಬೋರ್ಡ್‌ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ…

5 hours ago

ಕಳ್ಳಬೇಟೆ ತಡೆ ಶಿಬಿರ ಸ್ಫೋಟದ ಬೆನ್ನಲ್ಲೇ ಅರಣ್ಯಕ್ಕೆ ಬೆಂಕಿ: 10 ಎಕರೆ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…

5 hours ago

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

12 hours ago