BREAKING NEWS

ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾದ ಬಾಲಿವುಡ್‌ ನಟ

ಮುಂಬೈ: ನಟ, ಮಾಡೆಲ್‌ ಆಗಿ ಬಾಲಿವುಡ್‌ ನಲ್ಲಿ ಗುರುತಿಸಿಕೊಂಡಿದ್ದ ಆದಿತ್ಯ ಸಿಂಗ್ ರಜಪೂತ್ ತಮ್ಮ ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಮಧ್ಯಾಹ್ನ(ಮೇ.22) ಜನಪ್ರಿಯ ನಟ, ಮಾಡೆಲ್ ಮತ್ತು ಕಾಸ್ಟಿಂಗ್ ಸಂಯೋಜಕರಾಗಿದ್ದ ಆದಿತ್ಯ ಸಿಂಗ್ ರಜಪೂತ್  ಅಂಧೇರಿಯಲ್ಲಿರುವ ತಮ್ಮ ನಿವಾಸದ ವಾಶ್‌ ರೂಮ್‌ ಶವವಾಗಿ ಪತ್ತೆಯಾಗಿದ್ದಾರೆ.

ನಟನ ಸ್ನೇಹಿತ ಹಾಗೂ‌ ಕಟ್ಟಡದ ಸೆಕ್ಯೂರಿಟಿ ಗಾರ್ಡ್‌, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಅಧಿಕ ಪ್ರಮಾಣದಲ್ಲಿ ಡ್ರಗ್‌ ಸೇವಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಕಳೆದ ರಾತ್ರಿ ಸ್ನೇಹಿತರೊಂದಿಗೆ  ಇರುವ ಬಗ್ಗೆ ನಟ ಇನ್ಸ್ಟಾಗ್ರಾಮ್‌ ನಲ್ಲಿ ಸ್ಟೋರಿಯನ್ನು ಹಾಕಿದ್ದರು.

ಆದಿತ್ಯ ಸಿಂಗ್ ರಜಪೂತ್ ಮಾಡೆಲ್, ನಟನಾಗಿ ಗುರುತಿಸಿಕೊಂಡಿದ್ದರು. ನಟರೊಂದಿಗೆ ಅನೇಕ ಬ್ರ್ಯಾಂಡ್‌ಗಳಿಗೆ ಕೆಲಸ ಮಾಡಿದ್ದರು.

ʼಕ್ರಾಂತಿವೀರ್ ʼ, ʼಮೈನೆ ಗಾಂಧಿ ಕೋ ನಹಿಂ ಮಾರಾʼ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, 300 ಕ್ಕೂ  ಹೆಚ್ಚಿನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಶೋ ʼ Splitsvilla-9ʼ ರಲ್ಲಿ ಭಾಗವಹಿಸಿದ್ದರು. ʼಲವ್ʼ, ʼಆಶಿಕಿʼ, ʼಕೋಡ್ ರೆಡ್ʼ, ʼಆವಾಜ್ ಸೀಸನ್ 9ʼ, ʼಬ್ಯಾಡ್ ಬಾಯ್ ಸೀಸನ್ 4ʼ ಮತ್ತು ಇತರ ಟಿವಿ ಶೋಗಳಲ್ಲಿ ಭಾಗಿಯಾಗಿದ್ದರು.

andolanait

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

7 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

9 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

9 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

10 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

11 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

11 hours ago