BREAKING NEWS

ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾದ ಬಾಲಿವುಡ್‌ ನಟ

ಮುಂಬೈ: ನಟ, ಮಾಡೆಲ್‌ ಆಗಿ ಬಾಲಿವುಡ್‌ ನಲ್ಲಿ ಗುರುತಿಸಿಕೊಂಡಿದ್ದ ಆದಿತ್ಯ ಸಿಂಗ್ ರಜಪೂತ್ ತಮ್ಮ ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಮಧ್ಯಾಹ್ನ(ಮೇ.22) ಜನಪ್ರಿಯ ನಟ, ಮಾಡೆಲ್ ಮತ್ತು ಕಾಸ್ಟಿಂಗ್ ಸಂಯೋಜಕರಾಗಿದ್ದ ಆದಿತ್ಯ ಸಿಂಗ್ ರಜಪೂತ್  ಅಂಧೇರಿಯಲ್ಲಿರುವ ತಮ್ಮ ನಿವಾಸದ ವಾಶ್‌ ರೂಮ್‌ ಶವವಾಗಿ ಪತ್ತೆಯಾಗಿದ್ದಾರೆ.

ನಟನ ಸ್ನೇಹಿತ ಹಾಗೂ‌ ಕಟ್ಟಡದ ಸೆಕ್ಯೂರಿಟಿ ಗಾರ್ಡ್‌, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಅಧಿಕ ಪ್ರಮಾಣದಲ್ಲಿ ಡ್ರಗ್‌ ಸೇವಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಕಳೆದ ರಾತ್ರಿ ಸ್ನೇಹಿತರೊಂದಿಗೆ  ಇರುವ ಬಗ್ಗೆ ನಟ ಇನ್ಸ್ಟಾಗ್ರಾಮ್‌ ನಲ್ಲಿ ಸ್ಟೋರಿಯನ್ನು ಹಾಕಿದ್ದರು.

ಆದಿತ್ಯ ಸಿಂಗ್ ರಜಪೂತ್ ಮಾಡೆಲ್, ನಟನಾಗಿ ಗುರುತಿಸಿಕೊಂಡಿದ್ದರು. ನಟರೊಂದಿಗೆ ಅನೇಕ ಬ್ರ್ಯಾಂಡ್‌ಗಳಿಗೆ ಕೆಲಸ ಮಾಡಿದ್ದರು.

ʼಕ್ರಾಂತಿವೀರ್ ʼ, ʼಮೈನೆ ಗಾಂಧಿ ಕೋ ನಹಿಂ ಮಾರಾʼ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, 300 ಕ್ಕೂ  ಹೆಚ್ಚಿನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಶೋ ʼ Splitsvilla-9ʼ ರಲ್ಲಿ ಭಾಗವಹಿಸಿದ್ದರು. ʼಲವ್ʼ, ʼಆಶಿಕಿʼ, ʼಕೋಡ್ ರೆಡ್ʼ, ʼಆವಾಜ್ ಸೀಸನ್ 9ʼ, ʼಬ್ಯಾಡ್ ಬಾಯ್ ಸೀಸನ್ 4ʼ ಮತ್ತು ಇತರ ಟಿವಿ ಶೋಗಳಲ್ಲಿ ಭಾಗಿಯಾಗಿದ್ದರು.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

8 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

8 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

8 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

8 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

8 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

8 hours ago