BREAKING NEWS

ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾದ ಬಾಲಿವುಡ್‌ ನಟ

ಮುಂಬೈ: ನಟ, ಮಾಡೆಲ್‌ ಆಗಿ ಬಾಲಿವುಡ್‌ ನಲ್ಲಿ ಗುರುತಿಸಿಕೊಂಡಿದ್ದ ಆದಿತ್ಯ ಸಿಂಗ್ ರಜಪೂತ್ ತಮ್ಮ ಮನೆಯ ವಾಶ್‌ ರೂಮ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಸೋಮವಾರ ಮಧ್ಯಾಹ್ನ(ಮೇ.22) ಜನಪ್ರಿಯ ನಟ, ಮಾಡೆಲ್ ಮತ್ತು ಕಾಸ್ಟಿಂಗ್ ಸಂಯೋಜಕರಾಗಿದ್ದ ಆದಿತ್ಯ ಸಿಂಗ್ ರಜಪೂತ್  ಅಂಧೇರಿಯಲ್ಲಿರುವ ತಮ್ಮ ನಿವಾಸದ ವಾಶ್‌ ರೂಮ್‌ ಶವವಾಗಿ ಪತ್ತೆಯಾಗಿದ್ದಾರೆ.

ನಟನ ಸ್ನೇಹಿತ ಹಾಗೂ‌ ಕಟ್ಟಡದ ಸೆಕ್ಯೂರಿಟಿ ಗಾರ್ಡ್‌, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಆದಾಗಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಅಧಿಕ ಪ್ರಮಾಣದಲ್ಲಿ ಡ್ರಗ್‌ ಸೇವಿಸಿದ ಪರಿಣಾಮ ಈ ಘಟನೆ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಕಳೆದ ರಾತ್ರಿ ಸ್ನೇಹಿತರೊಂದಿಗೆ  ಇರುವ ಬಗ್ಗೆ ನಟ ಇನ್ಸ್ಟಾಗ್ರಾಮ್‌ ನಲ್ಲಿ ಸ್ಟೋರಿಯನ್ನು ಹಾಕಿದ್ದರು.

ಆದಿತ್ಯ ಸಿಂಗ್ ರಜಪೂತ್ ಮಾಡೆಲ್, ನಟನಾಗಿ ಗುರುತಿಸಿಕೊಂಡಿದ್ದರು. ನಟರೊಂದಿಗೆ ಅನೇಕ ಬ್ರ್ಯಾಂಡ್‌ಗಳಿಗೆ ಕೆಲಸ ಮಾಡಿದ್ದರು.

ʼಕ್ರಾಂತಿವೀರ್ ʼ, ʼಮೈನೆ ಗಾಂಧಿ ಕೋ ನಹಿಂ ಮಾರಾʼ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, 300 ಕ್ಕೂ  ಹೆಚ್ಚಿನ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. ಜನಪ್ರಿಯ ಶೋ ʼ Splitsvilla-9ʼ ರಲ್ಲಿ ಭಾಗವಹಿಸಿದ್ದರು. ʼಲವ್ʼ, ʼಆಶಿಕಿʼ, ʼಕೋಡ್ ರೆಡ್ʼ, ʼಆವಾಜ್ ಸೀಸನ್ 9ʼ, ʼಬ್ಯಾಡ್ ಬಾಯ್ ಸೀಸನ್ 4ʼ ಮತ್ತು ಇತರ ಟಿವಿ ಶೋಗಳಲ್ಲಿ ಭಾಗಿಯಾಗಿದ್ದರು.

andolanait

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

42 mins ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

2 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

3 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago