BREAKING NEWS

ಚುನಾವಣಾ ಪ್ರಚಾರದ ಸ್ಥಳದಲ್ಲಿ ಬಾಂಬ್ ದಾಳಿ

ಟೋಕಿಯೊ : ಜಪಾನ್ ಪ್ರಧಾನಿ ಪ್ಯುಮಿಯೊ ಕಿಶಿಡಾ ಭಾಷಣ ಮಾಡಬೇಕಿದ್ದ ವಕಯಾಮಾದ ಬಂದರು ಪ್ರದೇಶದಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರಧಾನಿ ಭಾಷಣಕ್ಕಾಗಿ ಜನ ಸೇರಿದ್ದ ಪ್ರದೇಶದಲ್ಲಿ ಸ್ಫೋಟದ ಸದ್ದು, ಬಿಳಿ ಬಣ್ಣದ ಹೊಗೆ ಆವರಿಸಿರುವುದು ಸುದ್ದಿವಾಹಿನಿಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿ ಕಂಡುಬಂದಿದೆ. ಘಟನೆ ಸಂಬಂಧ ಪಶ್ಚಿಮ ಜಪಾನ್‌ನಲ್ಲಿ ಒಬ್ಬ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿ ಎನ್‌ಎಚ್‌ಕೆ ವರದಿ ಮಾಡಿದೆ. ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ವಿಡಿಯೊ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿದೆ.‘ನಾನು ಘಟನೆಯಿಂದ ದಿಗ್ಭ್ರಮೆಗೊಂಡಿದ್ದೇನೆ.

ನನ್ನ ಹೃದಯ ಈಗಲೂ ಜೋರಾಗಿ ಬಡಿದುಕೊಳ್ಳುತ್ತಿದೆ’ಎಂದು ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ಹೇಳಿದ್ದಾರೆ. ಸ್ಫೋಟಕ್ಕೂ ಮೊದಲೇ ಜನರು ಓಡಲು ಆರಂಭಿಸಿದ್ದರು ಎಂದು ಒಬ್ಬ ವ್ಯಕ್ತಿ ಹೇಳಿದರೆ, ಯಾರೋ ಬಾಂಬ್ ಅನ್ನು ಎಸೆದರು ಎಂದು ಮತ್ತೊಬ್ಬ ವ್ಯಕ್ತಿ ಸುದ್ದಿವಾಹಿನಿಗೆ ತಿಳಿಸಿದ್ದಾರೆ. ಜಪಾನ್‌ ಸಂಸತ್ತಿನ ಕೆಳಮನೆಯ ಕ್ಷೇತ್ರವೊಂದರ ಉಪ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಕಿಶಿಡಾ ಸ್ವಲ್ಪ ಸಮಯದಲ್ಲೇ ಭಾಷಣ ಆರಂಭಿಸಬೇಕಿತ್ತು. ಅಷ್ಟರಲ್ಲಿ ಸ್ಫೋಟ ಸಂಭವಿಸಿದೆ.

‘ಪ್ರಜಾಪ್ರಭುತ್ವದ ದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಸಂದರ್ಭ ನಡೆದ ಈ ದಾಳಿಯು ವಿಷಾದನೀಯ ಮತ್ತು ಅಕ್ಷಮ್ಯ ಅಪರಾಧ’ ಎಂದು ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ(ಎಲ್‌ಡಿಪಿ) ಚುನಾವಣಾ ಕಾರ್ಯತಂತ್ರ ಮುಖ್ಯಸ್ಥೆ ಹಿರೊಶಿ ಮರಿಯಾಮಾ ಹೇಳಿದ್ದಾರೆ. ಜುಲೈ, 2022ರಲ್ಲಿ ಚುನಾವಣಾ ಪ್ರಚಾರದ ಸಂದರ್ಭ ಮಾಜಿ ಪ್ರಧಾನ ಮಂತ್ರಿ ಶಿಂಜೊ ಅಬೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಜಪಾನ್‌ನಲ್ಲಿ ರಾಜಕಾರಣಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.

lokesh

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

10 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

10 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

11 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

11 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

12 hours ago