BREAKING NEWS

ಚುನಾವಣಾ ಪ್ರಚಾರದ ಸ್ಥಳದಲ್ಲಿ ಬಾಂಬ್ ದಾಳಿ

ಟೋಕಿಯೊ : ಜಪಾನ್ ಪ್ರಧಾನಿ ಪ್ಯುಮಿಯೊ ಕಿಶಿಡಾ ಭಾಷಣ ಮಾಡಬೇಕಿದ್ದ ವಕಯಾಮಾದ ಬಂದರು ಪ್ರದೇಶದಲ್ಲಿ ಸ್ಮೋಕ್ ಬಾಂಬ್ ದಾಳಿ ನಡೆದಿದ್ದು, ಅವರನ್ನು ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಪ್ರಧಾನಿ ಭಾಷಣಕ್ಕಾಗಿ ಜನ ಸೇರಿದ್ದ ಪ್ರದೇಶದಲ್ಲಿ ಸ್ಫೋಟದ ಸದ್ದು, ಬಿಳಿ ಬಣ್ಣದ ಹೊಗೆ ಆವರಿಸಿರುವುದು ಸುದ್ದಿವಾಹಿನಿಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿ ಕಂಡುಬಂದಿದೆ. ಘಟನೆ ಸಂಬಂಧ ಪಶ್ಚಿಮ ಜಪಾನ್‌ನಲ್ಲಿ ಒಬ್ಬ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿ ಎನ್‌ಎಚ್‌ಕೆ ವರದಿ ಮಾಡಿದೆ. ಒಬ್ಬ ವ್ಯಕ್ತಿಯನ್ನು ವಶಕ್ಕೆ ಪಡೆದಿರುವ ವಿಡಿಯೊ ಸುದ್ದಿವಾಹಿನಿಗಳಲ್ಲಿ ಪ್ರಸಾರವಾಗಿದೆ.‘ನಾನು ಘಟನೆಯಿಂದ ದಿಗ್ಭ್ರಮೆಗೊಂಡಿದ್ದೇನೆ.

ನನ್ನ ಹೃದಯ ಈಗಲೂ ಜೋರಾಗಿ ಬಡಿದುಕೊಳ್ಳುತ್ತಿದೆ’ಎಂದು ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ಹೇಳಿದ್ದಾರೆ. ಸ್ಫೋಟಕ್ಕೂ ಮೊದಲೇ ಜನರು ಓಡಲು ಆರಂಭಿಸಿದ್ದರು ಎಂದು ಒಬ್ಬ ವ್ಯಕ್ತಿ ಹೇಳಿದರೆ, ಯಾರೋ ಬಾಂಬ್ ಅನ್ನು ಎಸೆದರು ಎಂದು ಮತ್ತೊಬ್ಬ ವ್ಯಕ್ತಿ ಸುದ್ದಿವಾಹಿನಿಗೆ ತಿಳಿಸಿದ್ದಾರೆ. ಜಪಾನ್‌ ಸಂಸತ್ತಿನ ಕೆಳಮನೆಯ ಕ್ಷೇತ್ರವೊಂದರ ಉಪ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ಕಿಶಿಡಾ ಸ್ವಲ್ಪ ಸಮಯದಲ್ಲೇ ಭಾಷಣ ಆರಂಭಿಸಬೇಕಿತ್ತು. ಅಷ್ಟರಲ್ಲಿ ಸ್ಫೋಟ ಸಂಭವಿಸಿದೆ.

‘ಪ್ರಜಾಪ್ರಭುತ್ವದ ದೇಶದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ಸಂದರ್ಭ ನಡೆದ ಈ ದಾಳಿಯು ವಿಷಾದನೀಯ ಮತ್ತು ಅಕ್ಷಮ್ಯ ಅಪರಾಧ’ ಎಂದು ಆಡಳಿತಾರೂಢ ಲಿಬರಲ್ ಡೆಮಾಕ್ರಟಿಕ್ ಪಕ್ಷದ(ಎಲ್‌ಡಿಪಿ) ಚುನಾವಣಾ ಕಾರ್ಯತಂತ್ರ ಮುಖ್ಯಸ್ಥೆ ಹಿರೊಶಿ ಮರಿಯಾಮಾ ಹೇಳಿದ್ದಾರೆ. ಜುಲೈ, 2022ರಲ್ಲಿ ಚುನಾವಣಾ ಪ್ರಚಾರದ ಸಂದರ್ಭ ಮಾಜಿ ಪ್ರಧಾನ ಮಂತ್ರಿ ಶಿಂಜೊ ಅಬೆ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಳಿಕ ಜಪಾನ್‌ನಲ್ಲಿ ರಾಜಕಾರಣಿಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ.

lokesh

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

2 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

3 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

3 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

4 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

9 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

9 hours ago