ಮುಂಬೈ : ದೇಶದ ವಾಣಿಜ್ಯ ರಾಜಧಾನಿ ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್ಲೈನ್ಸ್ ವಿಮಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ.
ಏರ್ ಟ್ರಾಫಿಕ್ ಕಂಟ್ರೋಲ್ ಬಾಂಬ್ ಬೆದರಿಕೆಯ ಬಗ್ಗೆ ವಿಮಾನದ ಕ್ಯಾಪ್ಟನ್ ಗೆ ಮಾಹಿತಿ ನೀಡಿದ ನಂತರ ಸಾಧ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿ ವಿಮಾನವನ್ನು ವಾರಣಾಸಿಯಲ್ಲಿ ಇಳಿಸಲಾಯಿತು. ವಿಮಾನವು ಪ್ರತ್ಯೇಕ ರನ್ ವೇಯಲ್ಲಿ ಇಳಿದು ಪ್ರಯಾಣಿಕರನ್ನು ತಕ್ಷಣವೇ ಇಳಿಸಲಾಯಿತು.
ಸಿಐಎಸ್ಎಫ್ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ವಿಮಾನದಲ್ಲಿ ತೀವ್ರ ಶೋಧ ನಡೆಸಿದರು. ತಪಾಸಣೆ ವೇಳೆ ಏನೂ ಪತ್ತೆಯಾಗಿಲ್ಲ.
ವಾರಣಾಸಿ ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ಎಲ್ಲವೂ ಸಹಜವಾಗಿದೆ. ಬಾಂಬ್ ಬಗ್ಗೆ ಮಾಹಿತಿ ಬಂದಾಗ, ವಿಮಾನ ನಿಲ್ದಾಣದ ಅಧಿಕಾರಿಗಳು ಸಂಪೂರ್ಣ ಮುಂಜಾಗ್ರತೆ ವಹಿಸಿ ಪರಿಶೀಲಿಸಿದಾಗ ಎಲ್ಲವೂ ಯಥಾಸ್ಥಿತಿಯಲ್ಲಿದೆ. ಈ ವಿಮಾನ ವಾರಣಾಸಿಗೆ ಬರುತ್ತಿತ್ತು. ಮುನ್ನೆಚ್ಚರಿಕೆಯಾಗಿ ಪ್ರತ್ಯೇಕ ರನ್ ವೇ ಯಲ್ಲಿ ಇಳಿಯಿತು.
ಹನೂರು : ಮೂರ್ಛೆ ತಪ್ಪಿದ್ದ ವೃದ್ದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಂಬುಲೆನ್ಸ್ ಸಿಗದೆ ಡೋಲಿ ಮುಖಾಂತರ ಕರೆದುಕೊಂಡು ಬಂದಿರುವ ಘಟನೆ…
2.5 ವರ್ಷದಲ್ಲಿ 592 ಭರವಸೆಗಳಲ್ಲಿ 243 ಭರವಸೆ ಈಡೇರಿಕೆ ಹಾವೇರಿ : ಏನು ಮಾತು ಕೊಟ್ಟಿದ್ದೆವೋ ಅದರಂತೆ ನಡೆದಿದ್ದೇವೆ. ಸಾವಿರ…
ಜಮ್ಮು : ನೆರೆಯ ಪಾಕಿಸ್ತಾನದಿಂದ ಡ್ರೋನ್ ಮೂಲಕ ಬಂದ ನಾಲ್ಕು ಕೆಜಿಗೂ ಹೆಚ್ಚು ಹೆರಾಯಿನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಗಡಿಯಲ್ಲಿ…
ಮದ್ದೂರು : ಮದ್ದೂರು ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ಸಲುವಾಗಿ ನಗರಸಭೆಗೆ ಗ್ರಾ.ಪಂ.ಗಳ ಸೇರ್ಪಡೆ ಸಂಬಂಧ ಸರ್ಕಾರದ ಹಂತದಲ್ಲಿ ಮಾತನಾಡಿ ಕ್ರಮ…
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…