ಮುಂಬೈ : ದೇಶದ ವಾಣಿಜ್ಯ ರಾಜಧಾನಿ ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್ಲೈನ್ಸ್ ವಿಮಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ.
ಏರ್ ಟ್ರಾಫಿಕ್ ಕಂಟ್ರೋಲ್ ಬಾಂಬ್ ಬೆದರಿಕೆಯ ಬಗ್ಗೆ ವಿಮಾನದ ಕ್ಯಾಪ್ಟನ್ ಗೆ ಮಾಹಿತಿ ನೀಡಿದ ನಂತರ ಸಾಧ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿ ವಿಮಾನವನ್ನು ವಾರಣಾಸಿಯಲ್ಲಿ ಇಳಿಸಲಾಯಿತು. ವಿಮಾನವು ಪ್ರತ್ಯೇಕ ರನ್ ವೇಯಲ್ಲಿ ಇಳಿದು ಪ್ರಯಾಣಿಕರನ್ನು ತಕ್ಷಣವೇ ಇಳಿಸಲಾಯಿತು.
ಸಿಐಎಸ್ಎಫ್ ಸಿಬ್ಬಂದಿ ಸುಮಾರು ಒಂದು ಗಂಟೆಗಳ ಕಾಲ ವಿಮಾನದಲ್ಲಿ ತೀವ್ರ ಶೋಧ ನಡೆಸಿದರು. ತಪಾಸಣೆ ವೇಳೆ ಏನೂ ಪತ್ತೆಯಾಗಿಲ್ಲ.
ವಾರಣಾಸಿ ವಿಮಾನ ನಿಲ್ದಾಣದ ನಿರ್ದೇಶಕ ಪುನೀತ್ ಗುಪ್ತಾ ಎಲ್ಲವೂ ಸಹಜವಾಗಿದೆ. ಬಾಂಬ್ ಬಗ್ಗೆ ಮಾಹಿತಿ ಬಂದಾಗ, ವಿಮಾನ ನಿಲ್ದಾಣದ ಅಧಿಕಾರಿಗಳು ಸಂಪೂರ್ಣ ಮುಂಜಾಗ್ರತೆ ವಹಿಸಿ ಪರಿಶೀಲಿಸಿದಾಗ ಎಲ್ಲವೂ ಯಥಾಸ್ಥಿತಿಯಲ್ಲಿದೆ. ಈ ವಿಮಾನ ವಾರಣಾಸಿಗೆ ಬರುತ್ತಿತ್ತು. ಮುನ್ನೆಚ್ಚರಿಕೆಯಾಗಿ ಪ್ರತ್ಯೇಕ ರನ್ ವೇ ಯಲ್ಲಿ ಇಳಿಯಿತು.
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…