ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ವಾಟರ್ ಟ್ರ್ಯಾಕ್ಟರ್ ಹರಿದು ಭುವನ್ ಎಂಬ ನಾಲ್ಕು ವರ್ಷ ವಯಸ್ಸಿನ ಬಾಲಕ ಮೃತಪಟ್ಟ ದಾರುಣ ಘಟನೆ ಬುಧವಾರ ಸಂಭವಿಸಿದೆ. ಅಣ್ಣನ ಜತೆ ಐಸ್ಕ್ರೀಸ್ ಕೊಳ್ಳಲು ಬೇಕರಿಗೆ ಬಂದಿದ್ದ ಭುವನ್ ಮೇಲೆ ಟ್ರ್ಯಾಕ್ಟರ್ ಚಲಿಸಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ಯಾಂಕರ್ ಚಲಾಯಿಸುತ್ತಿದ್ದ ಎನ್ನಲಾಗಿದೆ.
ವಾಟರ್ ಟ್ರ್ಯಾಕ್ಟರ್ ಭುವನ್ ತಲೆ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಗಾಯಾಳು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಂತರ ವಾಟರ್ ಟ್ಯಾಂಕರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.
ಭುವನ್ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಮೆಜೆಸ್ಟಿಕ್ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ಇತ್ತೀಚೆಗಷ್ಟೇ ಸಂಭವಿಸಿತ್ತು. ಇದರ ಕಹಿ ನೆನಪು ಮಾಸುವ ಮುನ್ನವೇ ಇದೀಗ ಟ್ರ್ಯಾಕ್ಟರ್ ಚಾಲಕನ ಬೇಜವಾಬ್ದಾರಿ, ಅಜಾಗರೂಕತೆಯ ಚಾಲನೆಯಿಂದ ಬಾಲಕ ಮೃತಪಟ್ಟಿದ್ದಾನೆ.
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…