BREAKING NEWS

ಬಿಜೆಪಿ ಸಂಸದನ ಮನೆಯಲ್ಲಿ ಬಾಲಕನ ಶವ ಪತ್ತೆ

ಅಸ್ಸಾಂ : ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದ ರಾಜ್‌ದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕನ ತಾಯಿ ರಾಜ್‌ದೀಪ್ ಅವರ ಮನೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಧೋಲೈ ಪ್ರದೇಶದವರಾಗಿದ್ದು, ಇಬ್ಬರು ಮಕ್ಕಳೊಂದಿಗೆ ತಮ್ಮ ನಿವಾಸದಲ್ಲಿ ವಾಸಗಿದ್ದರು. ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗ ತಕ್ಷಣವೇ ರಾಜ್‌ದೀಪ್ ರಾಯ್‌ಗೆ ಈ ಬಗ್ಗೆ ತಿಳಿಸಲಾಗಿತ್ತು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಸಂಸದರು ತಿಳಿಸಿದ್ದಾರೆ.

ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ಸಿಲ್ಚಾರ್ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದಾರೆ. ಈ ಘಟನೆಯನ್ನು ಆತ್ಮಹತ್ಯೆ ಎನ್ನಲಾಗಿದೆ. ಈ ಘಟನೆ ನಡೆದ ಸಂದರ್ಭ ನಾನು ಪಕ್ಷದ ಕಚೇರಿಯಲ್ಲಿದ್ದೆ. ವಿಷಯ ತಿಳಿದು ತಕ್ಷಣ ನಿವಾಸಕ್ಕೆ ಆಗಮಿಸಿದೆ. ಆಗ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಎಂದು ರಾಜ್‌ದೀಪ್ ರಾಯ್ ಹೇಳಿದ್ದಾರೆ.

ಬಾಲಕನ ಕುಟುಂಬ ನಮ್ಮ ನಿವಾಸದ ಮೊದಲ ಮಹಡಿಯಲ್ಲಿ ವಾಸವಾಗಿತ್ತು. ಬಾಲಕ ಉತ್ತಮ ನಡತೆಯನ್ನು ಹೊಂದಿದ್ದ. ನಾನು ಆತನನ್ನು ಶಾಲೆಗೂ ಸೇರಿಸಿದ್ದೆ. ಆತನ ತಾಯಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದ್ದಾರೆ.

lokesh

Recent Posts

ಹೊತ್ತಿ ಉರಿದ ಖಾಸಗಿ ಬಸ್‌ : ಸಂಪೂರ್ಣ ಕರಕಲು ; 40 ಪ್ರಯಾಣಿಕರು ಬಚಾವ್‌

ಬೆಂಗಳೂರು : ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೆಂಗಳೂರಿನಿಂದ ಯಾದಗಿರಿ ಕಡೆಗೆ ಹೊರಟಿದ್ದ ಖಾಸಗಿ ನಾನ್-ಎಸಿ ಸ್ಲೀಪರ್ ಬಸ್‌ವೊಂದು…

7 mins ago

ಓದುಗರ ಪತ್ರ: ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ

ಯುಜಿಡಿ ಕೇಬಲ್; ಸೆಸ್ಕ್ ನಿರ್ಲಕ್ಷ್ಯ ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ನಿಗಮ (ಸೆಸ್ಕ್)ನಿಂದ ಅಂಡರ್ ಗ್ರೌಂಡ್ ಕೇಬಲ್…

4 hours ago

ಓದುಗರ ಪತ್ರ: ನ್ಯಾಯಾಂಗ ಬಡಾವಣೆಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ರಾಜರಾಜೇಶ್ವರಿ ನಗರದ ಬಳಿಯ ನ್ಯಾಯಾಂಗ ಬಡಾವಣೆಯಲ್ಲಿ ಐದಕ್ಕೂ ಹೆಚ್ಚು ಸರ್ಕಾರಿ ವಸತಿನಿಲಯಗಳಿದ್ದು, ಬೆಳಿಗ್ಗೆ ಹಾಗೂ ಸಂಜೆ ಸಾಕಷ್ಟು ನಗರ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜು ಆವರಣದಲ್ಲಿನ ಕಸ ತೆರವುಗೊಳಿಸಿ

ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಆವರಣದಲ್ಲಿ ಪ್ಲಾಸ್ಟಿಕ್ ಬಾಟಲಿ, ಪ್ಲೇಟ್, ಚೀಲಗಳು ಹಾಗೂ ಮರದ ಎಲೆಗಳು ತುಂಬಿದ್ದು, ಅನೈರ್ಮಲ್ಯದ…

4 hours ago

ಓದುಗರ ಪತ್ರ: ಭರಚುಕ್ಕಿ ಜಲಪಾತ ಸಂಪರ್ಕ ರಸ್ತೆ ದುರಸ್ತಿ ಮಾಡಿ

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಭರಚುಕ್ಕಿ ಜಲಪಾತಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿಗಳಿಂದ ಕೂಡಿದ್ದು, ಹ್ಯಾಂಡ್ ಪೋಸ್ಟ್ ನಿಂದ ಶಿವನಸಮುದ್ರದ…

4 hours ago

ರೋಮಾಂಚನಕಾರಿ ಜಲ ಸಾಹಸ ಕ್ರೀಡೋತ್ಸವ…

ಚಾಮರಾಜನಗರ: ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಏರ್ಪಡಿಸಿರುವ ಎರಡು ದಿನಗಳ ‘ಜಿಲ್ಲಾ ಮಟ್ಟದ ಜಲ ಸಾಹಸ ಕ್ರೀಡೋತ್ಸವವನ್ನು’ ಜೆಟ್ ಸ್ಕೀ ಜಲ…

4 hours ago