ಅಸ್ಸಾಂ : ಅಸ್ಸಾಂನ ಸಿಲ್ಚಾರ್ನಲ್ಲಿರುವ ಬಿಜೆಪಿ ಸಂಸದ ರಾಜ್ದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಾಯಿ ರಾಜ್ದೀಪ್ ಅವರ ಮನೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಧೋಲೈ ಪ್ರದೇಶದವರಾಗಿದ್ದು, ಇಬ್ಬರು ಮಕ್ಕಳೊಂದಿಗೆ ತಮ್ಮ ನಿವಾಸದಲ್ಲಿ ವಾಸಗಿದ್ದರು. ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗ ತಕ್ಷಣವೇ ರಾಜ್ದೀಪ್ ರಾಯ್ಗೆ ಈ ಬಗ್ಗೆ ತಿಳಿಸಲಾಗಿತ್ತು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಸಂಸದರು ತಿಳಿಸಿದ್ದಾರೆ.
ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ಸಿಲ್ಚಾರ್ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದಾರೆ. ಈ ಘಟನೆಯನ್ನು ಆತ್ಮಹತ್ಯೆ ಎನ್ನಲಾಗಿದೆ. ಈ ಘಟನೆ ನಡೆದ ಸಂದರ್ಭ ನಾನು ಪಕ್ಷದ ಕಚೇರಿಯಲ್ಲಿದ್ದೆ. ವಿಷಯ ತಿಳಿದು ತಕ್ಷಣ ನಿವಾಸಕ್ಕೆ ಆಗಮಿಸಿದೆ. ಆಗ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಎಂದು ರಾಜ್ದೀಪ್ ರಾಯ್ ಹೇಳಿದ್ದಾರೆ.
ಬಾಲಕನ ಕುಟುಂಬ ನಮ್ಮ ನಿವಾಸದ ಮೊದಲ ಮಹಡಿಯಲ್ಲಿ ವಾಸವಾಗಿತ್ತು. ಬಾಲಕ ಉತ್ತಮ ನಡತೆಯನ್ನು ಹೊಂದಿದ್ದ. ನಾನು ಆತನನ್ನು ಶಾಲೆಗೂ ಸೇರಿಸಿದ್ದೆ. ಆತನ ತಾಯಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…