ಅಸ್ಸಾಂ : ಅಸ್ಸಾಂನ ಸಿಲ್ಚಾರ್ನಲ್ಲಿರುವ ಬಿಜೆಪಿ ಸಂಸದ ರಾಜ್ದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆಯಾಗಿದೆ. ಕುತ್ತಿಗೆಗೆ ಬಟ್ಟೆ ಸುತ್ತಿಕೊಂಡ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಆತ್ಮಹತ್ಯೆಯ ಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನ ತಾಯಿ ರಾಜ್ದೀಪ್ ಅವರ ಮನೆಯಲ್ಲಿ ಕಳೆದ ಎರಡೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಅವರು ಮೂಲತಃ ಧೋಲೈ ಪ್ರದೇಶದವರಾಗಿದ್ದು, ಇಬ್ಬರು ಮಕ್ಕಳೊಂದಿಗೆ ತಮ್ಮ ನಿವಾಸದಲ್ಲಿ ವಾಸಗಿದ್ದರು. ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಗ ತಕ್ಷಣವೇ ರಾಜ್ದೀಪ್ ರಾಯ್ಗೆ ಈ ಬಗ್ಗೆ ತಿಳಿಸಲಾಗಿತ್ತು. ತಕ್ಷಣ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆತ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿರುವುದಾಗಿ ಸಂಸದರು ತಿಳಿಸಿದ್ದಾರೆ.
ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಪೊಲೀಸರು ಸಿಲ್ಚಾರ್ ವೈದ್ಯಕೀಯ ಕಾಲೇಜಿಗೆ ರವಾನಿಸಿದ್ದಾರೆ. ಈ ಘಟನೆಯನ್ನು ಆತ್ಮಹತ್ಯೆ ಎನ್ನಲಾಗಿದೆ. ಈ ಘಟನೆ ನಡೆದ ಸಂದರ್ಭ ನಾನು ಪಕ್ಷದ ಕಚೇರಿಯಲ್ಲಿದ್ದೆ. ವಿಷಯ ತಿಳಿದು ತಕ್ಷಣ ನಿವಾಸಕ್ಕೆ ಆಗಮಿಸಿದೆ. ಆಗ ಬಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಎಂದು ರಾಜ್ದೀಪ್ ರಾಯ್ ಹೇಳಿದ್ದಾರೆ.
ಬಾಲಕನ ಕುಟುಂಬ ನಮ್ಮ ನಿವಾಸದ ಮೊದಲ ಮಹಡಿಯಲ್ಲಿ ವಾಸವಾಗಿತ್ತು. ಬಾಲಕ ಉತ್ತಮ ನಡತೆಯನ್ನು ಹೊಂದಿದ್ದ. ನಾನು ಆತನನ್ನು ಶಾಲೆಗೂ ಸೇರಿಸಿದ್ದೆ. ಆತನ ತಾಯಿ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದರು ಎಂದು ಅವರು ಹೇಳಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…