ಬೆಂಗಳೂರು : ಮುಂದಿನ 5 ವರ್ಷ ಸಿಎಂ ನಾನೇ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾದ ಬೆನ್ನಲ್ಲೇ ತಮ್ಮ ಸರ್ಕಾರಿ ನಿವಾಸ ಕಾವೇರಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಏರ್ಪಡಿಸಿದ್ದಾರೆ.
ಇದೇ ಸಂದರ್ಭದಲ್ಲಿ ಸಿಎಂ ಕಾವೇರಿ ನಿವಾಸದೊಳಗೆ ಹೊಸದಾಗಿ ನಿರ್ಮಿಸಿರುವ ಮೀಟಿಂಗ್ ಹಾಲ್ ಉದ್ಘಾಟನೆಯನ್ನೂ ಸಿಎಂ ನೆರವೇರಿಸಿದ್ದಾರೆ. ಸಿಎಂ ಆಹ್ವಾನದ ಮೇರೆಗೆ ಡಿಕೆ ಶಿವಕುಮಾರ್ ಸೇರಿ 14 ಮಂದಿ ಸಚಿವರು ಉಪಹಾರ ಕೂಟದಲ್ಲಿ ಭಾಗಿಯಾಗಿದ್ದಾರೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಸಚಿವ ಸತೀಶ್ ಜಾರಕಿಹೊಳಿ ಗೈರಾಗಿದ್ದಾರೆ, ಇದರೊಂದಿಗೆ ಕೆಜೆ ಜಾರ್ಜ್ ಕೂಡ ಗೈರಾಗಿದ್ದಾರೆ. ಉಳಿದಂತೆ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಎನ್.ಎಸ್ ಭೋಸರಾಜು, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ರಾಮಲಿಂಗಾರೆಡ್ಡಿ, ಡಾ.ಜಿ.ಪರಮೇಶ್ವರ್, ಎಂ.ಬಿ ಪಾಟೀಲ್, ಸಂತೋಷ್ ಲಾಡ್, ಈಶ್ವರ ಖಂಡ್ರೆ, ಬೈರತಿ ಸುರೇಶ್, ಕೆ.ಎನ್ ರಾಜಣ್ಣ, ಎಚ್.ಸಿ ಮಹದೇವಪ್ಪ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್, ಗೋವಿಂದರಾಜು ಮೊದಲಾದವರು ಸಭೆಯಲ್ಲಿ ಭಾಗಿಯಾಗಿದ್ದಾರೆ.
ಸಚಿವರಿಗೆ ನೀಡಿದ ಟಾಸ್ಕ್ ಬಗ್ಗೆ ಉಪಹಾರ ಕೂಟದ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಮುಂಬರುವ ಲೋಕಸಭಾ ಚುನಾವಣೆ, ಕಾಂಗ್ರೆಸ್ ಕಾರ್ಯತಂತ್ರ, ಬಿಜೆಪಿ ಜೆಡಿಎಸ್ ಮೈತ್ರಿ ಬಗ್ಗೆಯೂ ಚರ್ಚೆ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…