BREAKING NEWS

ಬೆಂಗಳೂರಿನಲ್ಲಿ ಕುಸಿಯುತ್ತಿದೆ ಉಸಿರಾಡುವ ಗಾಳಿಯ ಗುಣಮಟ್ಟ

ಬೆಂಗಳೂರು : ವಾಯುಮಾಲಿನ್ಯದ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ದೇಶದ ರಾಜಧಾನಿ ದೆಹಲಿ ಹಾದಿಯಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರು ದಾಪುಗಾಲಿರಿಸುತ್ತಿದ್ದು, ಸಿಲಿಕಾನ್ ಸಿಟಿಯ ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿಯುತ್ತಿದೆ ಎಂದು ವರದಿಯೊಂದು ಹೇಳಿದೆ.

ಖಾಸಗಿ ಹವಾಮಾನ ಸಂಸ್ಥೆ ಆ್ಯಕ್ಯು ವೆದರ್ ಈ ಬಗ್ಗೆ ವರದಿ ಮಾಡಿದ್ದು, ಬೆಂಗಳೂರಿನ ಇಂದಿನ ಗಾಳಿಯ ಗುಣಮಟ್ಟವನ್ನು ತಲುಪಿದೆ. ಇದು ಸೂಕ್ಷ್ಮ ಸಮುದಾಯದ ಜನರ ಗುಂಪುಗಳಿಗೆ ಅನಾರೋಗ್ಯಕರವಾಗಿದೆ. ಉಸಿರಾಟದ ತೊಂದರೆ ಅಥವಾ ಗಂಟಲಿನ ಕಿರಿಕಿರಿಯಂತಹ ರೋಗಲಕ್ಷಣಗಳನ್ನು ನೀವು ಅನುಭವಿಸುತ್ತಿದ್ದರೆ ಅನಾವಶ್ಯಕ ಹೊರಗಿನ ಓಡಾಟ ತಪ್ಪಿಸಿ ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ.

ಬೆಂಗಳೂರಿನ ಇಂದಿನ ವಾಯು ಗುಣಮಟ್ಟ PM 2.6 75 ಆಗಿದ್ದು, PM 10 ನ ಪ್ರಮಾಣ 51ರಷ್ಟಿದೆ. ಈ ಎರಡೂ ಅಂಶಗಳ ಪ್ರಮಾಣ ಕಳಪೆ ಎಂದು ಆ್ಯಕ್ಯುವೆದರ್ ವರದಿ ಮಾಡಿದೆ.

ಉಳಿದಂತೆ ನಗರದಲ್ಲಿನ ಗಾಳಿಯಲ್ಲಿನ ಎನ್ಒ2 ಪ್ರಮಾಣ 23ರಷ್ಟಿದ್ದು, ಇದು ಉತ್ತಮ ಪ್ರಮಾಣದಲ್ಲಿದೆ. ಅಂತೆಯೇ ಓಜೋನ್ ಪ್ರಮಾಣ 13ರಷ್ಟಿದ್ದು, ಕಾರ್ಬನ್ ಮಾನಾಕ್ಸೈಡ್ 2ರಷ್ಟಿದ್ದು, ಈ ಎರಡೂ ಅಂಶಗಳ ಪ್ರಮಾಣ ಉತ್ತಮವಾಗಿದೆ ಎಂದು ಆ್ಯಕ್ಯು ವೆದರ್ ವರದಿ ಮಾಡಿದೆ.

lokesh

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

14 hours ago