ಬೆಂಗಳೂರು : ವಾಯುಮಾಲಿನ್ಯದ ವಿಚಾರವಾಗಿ ಸದಾ ಸುದ್ದಿಯಲ್ಲಿರುವ ದೇಶದ ರಾಜಧಾನಿ ದೆಹಲಿ ಹಾದಿಯಲ್ಲೇ ಕರ್ನಾಟಕ ರಾಜಧಾನಿ ಬೆಂಗಳೂರು ದಾಪುಗಾಲಿರಿಸುತ್ತಿದ್ದು, ಸಿಲಿಕಾನ್ ಸಿಟಿಯ ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿಯುತ್ತಿದೆ ಎಂದು ವರದಿಯೊಂದು ಹೇಳಿದೆ.
ಖಾಸಗಿ ಹವಾಮಾನ ಸಂಸ್ಥೆ ಆ್ಯಕ್ಯು ವೆದರ್ ಈ ಬಗ್ಗೆ ವರದಿ ಮಾಡಿದ್ದು, ಬೆಂಗಳೂರಿನ ಇಂದಿನ ಗಾಳಿಯ ಗುಣಮಟ್ಟವನ್ನು ತಲುಪಿದೆ. ಇದು ಸೂಕ್ಷ್ಮ ಸಮುದಾಯದ ಜನರ ಗುಂಪುಗಳಿಗೆ ಅನಾರೋಗ್ಯಕರವಾಗಿದೆ. ಉಸಿರಾಟದ ತೊಂದರೆ ಅಥವಾ ಗಂಟಲಿನ ಕಿರಿಕಿರಿಯಂತಹ ರೋಗಲಕ್ಷಣಗಳನ್ನು ನೀವು ಅನುಭವಿಸುತ್ತಿದ್ದರೆ ಅನಾವಶ್ಯಕ ಹೊರಗಿನ ಓಡಾಟ ತಪ್ಪಿಸಿ ಎಂದು ವರದಿಯಲ್ಲಿ ಸಲಹೆ ನೀಡಲಾಗಿದೆ.
ಬೆಂಗಳೂರಿನ ಇಂದಿನ ವಾಯು ಗುಣಮಟ್ಟ PM 2.6 75 ಆಗಿದ್ದು, PM 10 ನ ಪ್ರಮಾಣ 51ರಷ್ಟಿದೆ. ಈ ಎರಡೂ ಅಂಶಗಳ ಪ್ರಮಾಣ ಕಳಪೆ ಎಂದು ಆ್ಯಕ್ಯುವೆದರ್ ವರದಿ ಮಾಡಿದೆ.
ಉಳಿದಂತೆ ನಗರದಲ್ಲಿನ ಗಾಳಿಯಲ್ಲಿನ ಎನ್ಒ2 ಪ್ರಮಾಣ 23ರಷ್ಟಿದ್ದು, ಇದು ಉತ್ತಮ ಪ್ರಮಾಣದಲ್ಲಿದೆ. ಅಂತೆಯೇ ಓಜೋನ್ ಪ್ರಮಾಣ 13ರಷ್ಟಿದ್ದು, ಕಾರ್ಬನ್ ಮಾನಾಕ್ಸೈಡ್ 2ರಷ್ಟಿದ್ದು, ಈ ಎರಡೂ ಅಂಶಗಳ ಪ್ರಮಾಣ ಉತ್ತಮವಾಗಿದೆ ಎಂದು ಆ್ಯಕ್ಯು ವೆದರ್ ವರದಿ ಮಾಡಿದೆ.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…