ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಕಲ್ಪಿಸುತ್ತಿದ್ದ ಆರ್ಟಿಕಲ್ 370 ಹಿಂತೆಗೆತವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಕೈಗೆತ್ತಿಕೊಂಡಿದೆ.
ಆರ್ಟಿಕಲ್ 370 ನ್ನು ರದ್ದುಗೊಳಿಸಿರುವುದು ಸಂವಿಧಾನಾತ್ಮಕವಾಗಿ ಕ್ರಮಬದ್ಧವಾಗಿದೆಯೋ ಇಲ್ಲವೋ ಎಂಬ ಪ್ರಶ್ನೆ ತನ್ನ ಮುಂದಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಆರ್ಟಿಕಲ್ 370 ಕುರಿತು ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದೆ.
ಭಾರತ ಸಾಂವಿಧಾನಿಕ ಪ್ರಜಾಪ್ರಭುತ್ವವಾಗಿದ್ದು, ಜನರ ಅಭಿಪ್ರಾಯಗಳನ್ನು ಸ್ಥಾಪಿತ ಸಂಸ್ಥೆಗಳ ಮೂಲಕವಷ್ಟೇ ಖಚಿತಪಡಿಸಿಕೊಳ್ಳಬಹುದಾಗಿದೆ ಎಂದು ಕೋರ್ಟ್ ಹೇಳಿದೆ.
ಆರ್ಟಿಕಲ್ 370 ರದ್ದುಗೊಳಿಸಿರುವ ಕ್ರಮ ಬ್ರೆಕ್ಸಿಟ್ ಮಾದರಿಯ ರಾಜಕೀಯ ನಡೆಯಾಗಿದೆ, ಬ್ರೆಕ್ಸಿಟ್ ನಲ್ಲಿ ಬ್ರಿಟೀಷ್ ಪ್ರಜೆಗಳ ಅಭಿಪ್ರಾಯವನ್ನು ಜನಾಭಿಪ್ರಾಯ ಸಂಗ್ರಹದ ಮೂಲಕ ಪಡೆಯಲಾಗಿತ್ತು ಎಂದು ವಾದ ಮಾಡುವಾಗ ಹಿರಿಯ ವಕೀಲ ಕಪಿಲ್ ಸಿಬಲ್ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸಿಜೆಐ ಡಿ ವೈ ಚಂದ್ರಚೂಡ್ ನೇತೃತ್ವದ ಪೀಠ ಬ್ರೆಕ್ಸಿಟ್ ಮಾದರಿಯ ಜನಾಭಿಪ್ರಾಯ ಸಂಗ್ರಹಣೆ ಪ್ರಶ್ನೆಯೇ ಇಲ್ಲ ಎಂದು ಹೇಳಿದೆ.
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…